೪೧.
ಶ್ರೀ ಗುರುಲಿಂಗದೇವರು ತಮ್ಮ ಹಸ್ತವ ತಂದು
ಎನ್ನ ಮಸ್ತಕದ ಮೇಲೆ ಇರಿಸಿದಾಗಳೇ
ಎನ್ನ ಭವಂ ನಾಸ್ತಿಯಾಯಿತ್ತು! ಎನ್ನ ತನ್ನಂತೆ ಮಾಡಿದ!
ಎನಗೆ-ತನಗೆ ತೆರಹಿಲ್ಲದಂತೆ ಮಾಡಿ ತೋರಿದನು ನೋಡಾ!
ತನ್ನ ಕರಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಕರಸ್ಥಲದಲ್ಲಿ ಮೂರ್ತಿಗೊಳಿಸಿದ!
ಎನ್ನ ಕರಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಮನಸ್ಥಲದಲ್ಲಿ ಮೂರ್ತಿಗೊಳಿಸಿದ!
ಎನ್ನ ಮನಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಭಾವಸ್ಥಲದಲ್ಲಿ ಮೂರ್ತಿಗೊಳಿಸಿದ!
ಎನ್ನ ಭಾವಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಜ್ಞಾನಸ್ಥಲದಲ್ಲಿ ಮೂರ್ತಿಗೊಳಿಸಿದ!
ಎನ್ನ ಜ್ಞಾನಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಸರ್ವಾಂಗದೊಳಹೊರಗೆ ತೆರಹಿಲ್ಲದಳವಡಿಸಿದ
ನಮ್ಮ ಗುರುಲಿಂಗದೇವ ಚೆನ್ನಮಲ್ಲಿಕಾರ್ಜುನ
೪೨.
ನಿತ್ಯವೆನ್ನ ಮನೆಗೆ ನಡೆದು ಬಂದಿತ್ತು
ಮುಕ್ತಿಯೆನ್ನ ಮನೆಗೆ ನಡೆದು ಬಂದಿತ್ತು
ಜಯ ಜಯ ಗುರು ನಮೋ
ಪರಮ ಗುರುವೆ ನಮೋ ನಮೋ
ಚೆನ್ನಮಲ್ಲಿಕಾರ್ಜುನನ ತಂದೆನಗೆ ತೋರಿ ಕೊಟ್ಟ
ಗುರುವೆ ನಮೋ ನಮೋ
೪೩.
ನರ-ಜನ್ಮವ ತೊಡೆದು
ಹರ-ಜನ್ಮವ ಮಾಡಿದ ಗುರುವೆ
ಭವಬಂಧನವ ಬಿಡಿಸಿ
ಪರಮಸುಖವ ತೋರಿದ ಗುರುವೆ
ಭವಿ ಎಂಬುದ ತೊಡೆದು
ಭಕ್ತೆ ಎಂದೆನಿಸಿದ ಗುರುವೆ
ಚೆನ್ನಮಲ್ಲಿಕಾರ್ಜುನನ ತಂದೆನ್ನ ಕೈವಶಕೆ
ಕೊಟ್ಟ ಗುರುವೆ ನಮೋ ನಮೋ
೪೪.
ಸಂಸಾರಸಾಗರದೊಳಗೆ ಬಿದ್ದೆ ನೋಡಾ ನಾನು
ಸಂಸಾರ ನಿಸ್ಸಾರವೆಂದು ತೋರಿದನೆನಗೆ ಗುರು
ಅಂಗ ವಿಕಾರದ ಸಂಗವ ನಿಲಿಸಿ
ಲಿಂಗವನಂಗದ ಮೇಲೆ ಸ್ಥಾಪ್ಯವ ಮಾಡಿದನೆನ್ನ ಗುರು
ಹಿಂದಣ ಜನ್ಮವ ತೊಡೆದು
ಮುಂದಣ ಪಥವ ತೋರಿದನೆನ್ನ ತಂದೆ
ಚೆನ್ನಮಲ್ಲಿಕಾರ್ಜುನನ ನಿಜವನರುಹಿದನೆನ್ನ ಗುರು
೪೫.
ಅರಲುಗೊಂಡ ಕೆರೆಗೆ ತೊರೆ ಬಂದು ಹಾಯ್ದಂತೆ
ಬರಲುಗೊಂಡ ಸಸಿಗೆ ಮಳೆಸುರಿದಂತಾಯ್ತು ನೋಡಾ!
ಇಂದೆನಗೆ ಇಹದ ಸುಖ, ಪರದ ಗತಿ ನಡೆದು ಬಂದಂತಾಯಿತ್ತು
ನೋಡಾ ಚೆನ್ನಮಲ್ಲಿಕಾರ್ಜುನಯ್ಯ ಗುರುಪಾದವ ಕಂಡು
ಧನ್ಯಳಾದೆನು ನೋಡಾ
೪೬.
ಲೋಕದ ಚೇಷ್ಟೆಗೆ ರವಿ ಬೀಜವಾದಂತೆ
ಕರಣಂಗಳ ಚೇಷ್ಟೆಗೆ ಮನವೇ ಬೀಜ!
ಎನಗುಳ್ಳುದೊಂದು ಮನ,
ಆ ಮನ ನಿಮ್ಮಲ್ಲಿ ಒಡೆವೆರೆದ ಬಳಿಕ
ಎನಗೆ ಭಯವುಂಟೆ ಚೆನ್ನಮಲ್ಲಿಕಾರ್ಜುನಯ್ಯ!?
೪೭.
ಅಂಗವ ಲಿಂಗಮುಖಕ್ಕೆ ಅರ್ಪಿಸಿ
ಅಂಗ ಅನಂಗವಾಯಿತ್ತು
ಮನವ ಅರಿವಿಂಗರ್ಪಿಸಿ ಮನ ಲಯವಾಯಿತ್ತು
ಭಾವವ ತೃಪ್ತಿಗರ್ಪಿಸಿ ಭಾವ ಬಯಲಾಯಿತ್ತು
ಅಂಗ-ಮನ-ಭಾವವಳಿದ ಕಾರಣ ಕಾಯ ಅಕಾಯವಾಯಿತ್ತು
ಎನ್ನ ಅಕಾಯದ ಸುಖವ ಲಿಂಗ ಭೋಗಿಸುವನಾಗಿ
ಶರಣಸತಿ-ಲಿಂಗಪತಿಯಾದೆನು!
ಇದು ಕಾರಣ ಚೆನ್ನಮಲ್ಲಿಕಾರ್ಜುನಯ್ಯನೆಂಬ
ಗಂಡನ ಒಳಹೊಕ್ಕು ಬೆರೆಸಿದೆನು!
೪೮.
ಹರನೇ ನೀನೆನಗೆ ಗಂಡನಾಗಬೇಕೆಂದು
ಅನಂತಕಾಲ ತಪಿಸಿದ್ದೆ ನೋಡಾ!
ಹದೆಯ ಮೇಲಣ ಮಾತ ಬೆಸಗೊಳಲಟ್ಟಿದರೆ
ಶಶಿಧರನ ಹತ್ತಿರಕ್ಕೆ ಕಳುಹಿದರೆಮ್ಮವರು
ಭಸ್ಮವನೇ ಪೂಸಿ ಕಂಕಣವನೆ ಕಟ್ಟಿದರು
ಚೆನ್ನಮಲ್ಲಿಕಾರ್ಜುನ ತನಗೆ ನಾನಾಗಬೇಕೆಂದು!
೪೯.
ಜಲದ ಮಂಟಪದ ಮೇಲೆ
ಉರಿಯ ಚಪ್ಪರವನಿಕ್ಕಿ,
ಆಲಿಕಲ್ಲ ಹಸೆಯ ಹಾಸಿ, ಬಾಸಿಗವ ಕಟ್ಟಿ
ಕಾಲಿಲ್ಲದ ಹೆಂಡತಿಗೆ
ತಲೆಯಿಲ್ಲದ ಗಂಡ ಬಂದು ಮುಟ್ಟಿದನು ನೋಡಾ!
ಎಂದೆಂದೂ ಬಿಡದ ಬಾಳುವೆಗೆ ಕೊಟ್ಟರೆನ್ನ
ಚೆನ್ನಮಲ್ಲಿಕಾರ್ಜುನಯ್ಯನಿಗೆ!
೫೦.
ಎನ್ನ ನಾನರಿಯದಂದು ಮುನ್ನ ನೀನೆಲ್ಲಿರ್ದೆ? ಹೇಳಯ್ಯ!
ಚಿನ್ನದೊಳಗಣ ಬಣ್ಣದಂತೆ ಎನ್ನೊಳಗಿರ್ದೆಯಯ್ಯ
ಎನ್ನೊಳಗಿರ್ದು ಮೈದೋರದ ಭೇದವ
ನಿಮ್ಮಲ್ಲಿ ಕಂಡೆನು ಕಾಣಾ ಚೆನ್ನಮಲ್ಲಿಕಾರ್ಜುನ
ಶ್ರೀ ಗುರುಲಿಂಗದೇವರು ತಮ್ಮ ಹಸ್ತವ ತಂದು
ಎನ್ನ ಮಸ್ತಕದ ಮೇಲೆ ಇರಿಸಿದಾಗಳೇ
ಎನ್ನ ಭವಂ ನಾಸ್ತಿಯಾಯಿತ್ತು! ಎನ್ನ ತನ್ನಂತೆ ಮಾಡಿದ!
ಎನಗೆ-ತನಗೆ ತೆರಹಿಲ್ಲದಂತೆ ಮಾಡಿ ತೋರಿದನು ನೋಡಾ!
ತನ್ನ ಕರಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಕರಸ್ಥಲದಲ್ಲಿ ಮೂರ್ತಿಗೊಳಿಸಿದ!
ಎನ್ನ ಕರಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಮನಸ್ಥಲದಲ್ಲಿ ಮೂರ್ತಿಗೊಳಿಸಿದ!
ಎನ್ನ ಮನಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಭಾವಸ್ಥಲದಲ್ಲಿ ಮೂರ್ತಿಗೊಳಿಸಿದ!
ಎನ್ನ ಭಾವಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಜ್ಞಾನಸ್ಥಲದಲ್ಲಿ ಮೂರ್ತಿಗೊಳಿಸಿದ!
ಎನ್ನ ಜ್ಞಾನಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಸರ್ವಾಂಗದೊಳಹೊರಗೆ ತೆರಹಿಲ್ಲದಳವಡಿಸಿದ
ನಮ್ಮ ಗುರುಲಿಂಗದೇವ ಚೆನ್ನಮಲ್ಲಿಕಾರ್ಜುನ
೪೨.
ನಿತ್ಯವೆನ್ನ ಮನೆಗೆ ನಡೆದು ಬಂದಿತ್ತು
ಮುಕ್ತಿಯೆನ್ನ ಮನೆಗೆ ನಡೆದು ಬಂದಿತ್ತು
ಜಯ ಜಯ ಗುರು ನಮೋ
ಪರಮ ಗುರುವೆ ನಮೋ ನಮೋ
ಚೆನ್ನಮಲ್ಲಿಕಾರ್ಜುನನ ತಂದೆನಗೆ ತೋರಿ ಕೊಟ್ಟ
ಗುರುವೆ ನಮೋ ನಮೋ
೪೩.
ನರ-ಜನ್ಮವ ತೊಡೆದು
ಹರ-ಜನ್ಮವ ಮಾಡಿದ ಗುರುವೆ
ಭವಬಂಧನವ ಬಿಡಿಸಿ
ಪರಮಸುಖವ ತೋರಿದ ಗುರುವೆ
ಭವಿ ಎಂಬುದ ತೊಡೆದು
ಭಕ್ತೆ ಎಂದೆನಿಸಿದ ಗುರುವೆ
ಚೆನ್ನಮಲ್ಲಿಕಾರ್ಜುನನ ತಂದೆನ್ನ ಕೈವಶಕೆ
ಕೊಟ್ಟ ಗುರುವೆ ನಮೋ ನಮೋ
೪೪.
ಸಂಸಾರಸಾಗರದೊಳಗೆ ಬಿದ್ದೆ ನೋಡಾ ನಾನು
ಸಂಸಾರ ನಿಸ್ಸಾರವೆಂದು ತೋರಿದನೆನಗೆ ಗುರು
ಅಂಗ ವಿಕಾರದ ಸಂಗವ ನಿಲಿಸಿ
ಲಿಂಗವನಂಗದ ಮೇಲೆ ಸ್ಥಾಪ್ಯವ ಮಾಡಿದನೆನ್ನ ಗುರು
ಹಿಂದಣ ಜನ್ಮವ ತೊಡೆದು
ಮುಂದಣ ಪಥವ ತೋರಿದನೆನ್ನ ತಂದೆ
ಚೆನ್ನಮಲ್ಲಿಕಾರ್ಜುನನ ನಿಜವನರುಹಿದನೆನ್ನ ಗುರು
೪೫.
ಅರಲುಗೊಂಡ ಕೆರೆಗೆ ತೊರೆ ಬಂದು ಹಾಯ್ದಂತೆ
ಬರಲುಗೊಂಡ ಸಸಿಗೆ ಮಳೆಸುರಿದಂತಾಯ್ತು ನೋಡಾ!
ಇಂದೆನಗೆ ಇಹದ ಸುಖ, ಪರದ ಗತಿ ನಡೆದು ಬಂದಂತಾಯಿತ್ತು
ನೋಡಾ ಚೆನ್ನಮಲ್ಲಿಕಾರ್ಜುನಯ್ಯ ಗುರುಪಾದವ ಕಂಡು
ಧನ್ಯಳಾದೆನು ನೋಡಾ
೪೬.
ಲೋಕದ ಚೇಷ್ಟೆಗೆ ರವಿ ಬೀಜವಾದಂತೆ
ಕರಣಂಗಳ ಚೇಷ್ಟೆಗೆ ಮನವೇ ಬೀಜ!
ಎನಗುಳ್ಳುದೊಂದು ಮನ,
ಆ ಮನ ನಿಮ್ಮಲ್ಲಿ ಒಡೆವೆರೆದ ಬಳಿಕ
ಎನಗೆ ಭಯವುಂಟೆ ಚೆನ್ನಮಲ್ಲಿಕಾರ್ಜುನಯ್ಯ!?
೪೭.
ಅಂಗವ ಲಿಂಗಮುಖಕ್ಕೆ ಅರ್ಪಿಸಿ
ಅಂಗ ಅನಂಗವಾಯಿತ್ತು
ಮನವ ಅರಿವಿಂಗರ್ಪಿಸಿ ಮನ ಲಯವಾಯಿತ್ತು
ಭಾವವ ತೃಪ್ತಿಗರ್ಪಿಸಿ ಭಾವ ಬಯಲಾಯಿತ್ತು
ಅಂಗ-ಮನ-ಭಾವವಳಿದ ಕಾರಣ ಕಾಯ ಅಕಾಯವಾಯಿತ್ತು
ಎನ್ನ ಅಕಾಯದ ಸುಖವ ಲಿಂಗ ಭೋಗಿಸುವನಾಗಿ
ಶರಣಸತಿ-ಲಿಂಗಪತಿಯಾದೆನು!
ಇದು ಕಾರಣ ಚೆನ್ನಮಲ್ಲಿಕಾರ್ಜುನಯ್ಯನೆಂಬ
ಗಂಡನ ಒಳಹೊಕ್ಕು ಬೆರೆಸಿದೆನು!
೪೮.
ಹರನೇ ನೀನೆನಗೆ ಗಂಡನಾಗಬೇಕೆಂದು
ಅನಂತಕಾಲ ತಪಿಸಿದ್ದೆ ನೋಡಾ!
ಹದೆಯ ಮೇಲಣ ಮಾತ ಬೆಸಗೊಳಲಟ್ಟಿದರೆ
ಶಶಿಧರನ ಹತ್ತಿರಕ್ಕೆ ಕಳುಹಿದರೆಮ್ಮವರು
ಭಸ್ಮವನೇ ಪೂಸಿ ಕಂಕಣವನೆ ಕಟ್ಟಿದರು
ಚೆನ್ನಮಲ್ಲಿಕಾರ್ಜುನ ತನಗೆ ನಾನಾಗಬೇಕೆಂದು!
೪೯.
ಜಲದ ಮಂಟಪದ ಮೇಲೆ
ಉರಿಯ ಚಪ್ಪರವನಿಕ್ಕಿ,
ಆಲಿಕಲ್ಲ ಹಸೆಯ ಹಾಸಿ, ಬಾಸಿಗವ ಕಟ್ಟಿ
ಕಾಲಿಲ್ಲದ ಹೆಂಡತಿಗೆ
ತಲೆಯಿಲ್ಲದ ಗಂಡ ಬಂದು ಮುಟ್ಟಿದನು ನೋಡಾ!
ಎಂದೆಂದೂ ಬಿಡದ ಬಾಳುವೆಗೆ ಕೊಟ್ಟರೆನ್ನ
ಚೆನ್ನಮಲ್ಲಿಕಾರ್ಜುನಯ್ಯನಿಗೆ!
೫೦.
ಎನ್ನ ನಾನರಿಯದಂದು ಮುನ್ನ ನೀನೆಲ್ಲಿರ್ದೆ? ಹೇಳಯ್ಯ!
ಚಿನ್ನದೊಳಗಣ ಬಣ್ಣದಂತೆ ಎನ್ನೊಳಗಿರ್ದೆಯಯ್ಯ
ಎನ್ನೊಳಗಿರ್ದು ಮೈದೋರದ ಭೇದವ
ನಿಮ್ಮಲ್ಲಿ ಕಂಡೆನು ಕಾಣಾ ಚೆನ್ನಮಲ್ಲಿಕಾರ್ಜುನ
Comments
Post a Comment