Skip to main content

ಅಲ್ಲಮಪ್ರಭುವಿನ ವಚನಗಳು : 111 ರಿಂದ 120

೧೧೧.
ಅಱಿದಱಿದು ಅಱಿವು ಬಱುದೊಱಿವೋಯಿತ್ತು !
"ಕುಱುಹ[ತೋಱ]ದಡೆಂತೂ ನಂಬರು,
ತೆಱಹಿಲ್ಲದ ಘನವ ನೆನೆದು
ಗುರುಶರಣೆಂಬುದಲ್ಲದೆ ಮಱಹು ಬಂದೀತೆಂ"ದು
ಗುರು ಕುಱುಹ ತೋಱಿದನಲ್ಲದೆ
ಬಲ್ಲಡೆ ಗುಹೇಶ್ವರಲಿಂಗವು ಹೃದಯದಲೈದಾನೆ.

೧೧೨.
ಉದಕ ಮೂರುತಿಯಾಗಿ
ಉದಯವಾಯಿತ್ತು ಪಿಂಡಿಗೆಯಲ್ಲಿ
ಮೂಲ ಸ್ಥಾನ ಸ್ಥಾಪ್ಯವಾಯಿತ್ತು
ಸ್ವದೇಹಶಿವಪುರದಲ್ಲಿ !
ವಾಯು ಪೂಜಾರಿಯಾಗಿ
ಪರಿಮಳದಿಂಡೆದಂಡೆಯ ಕಟ್ಟಿ
ಪೂಜಿಸುತ್ತಿರ್ದುದೋ ನವದ್ವಾರಶಿವಾಲಯದಾದಿಮಧ್ಯಸ್ಥಾನದಲ್ಲಿ
ಗುಹೇಶ್ವರನೆಂಬುದಲ್ಲಿಯೆ ನಿಂದಿತ್ತು.

೧೧೩.
ಕಾಲೇ ಕಂಭಗಳಾದವೆನ್ನ
ದೇಹವೇ ದೇಗುಲವಾದುವಯ್ಯ !
ಎನ್ನ ನಾಲಗೆಯೆ ಘಂಟೆ
ಶಿರ ಸುವರ್ಣದ ಕಳಸವಿದೇನಯ್ಯ !
ಸ್ವರವೇ ಲಿಂಗಕ್ಕೆ ಸಿಂಹಾಸನವಾಗಿರ್ದುದು !
ಗುಹೇಶ್ವರ,
ನಿಮ್ಮ ಪ್ರಾಣಲಿಂಗಪ್ರತಿಷ್ಠೆ ಪಲ್ಲಟವಾಗದಂತಿದ್ದೆನಯ್ಯ.

೧೧೪.
ಪ್ರಾಣಲಿಂಗಕ್ಕೆ ಕಾಯವೇ ಸೆಜ್ಜೆ
ಆಕಾಶಗಂಗೆಯಲ್ಲಿ ಮಜ್ಜನ
ಹೂವಿಲ್ಲದ ಪರಿಮಳದ ಪೂಜೆ
ಹೃದಯಕಮಲದಲ್ಲಿ ಶಿವಶಿವಾ ಎಂಬ ಶಬ್ದ
ಇದು ಅದ್ವೈತ ಕಾಣಾ ಗುಹೇಶ್ವರ.

೧೧೫.
ಹೊತ್ತಾರೆ ಪೂಜಿಸಲುಬೇಡ ಕಂಡಾ !
ಬೈಗೆ ಪೂಜಿಸಲುಬೇಡ ಕಂಡಾ !
ಇರುಳುವನೂ ಹಗಲುವನೂ ಕಳೆದು ಪೂಜಿಸಬೇಕು ಕಂಡಾ !
ಇಂತಪ್ಪ ಪೂಜೆಯ ಪೂಜಿಸುವರ
ಎನಗೆ ತೋಱಯ್ಯ ಗುಹೇಶ್ವರ.

೧೧೬.
ಅಂಗದಲ್ಲಿ ಮಾಡುವ ಸುಖವದು
ಲಿಂಗಕ್ಕೆ ಭೂಷಣವಾಯಿತ್ತು.
ಕಾಡುಗಿಚ್ಚಿನ ಕೈಯಲ್ಲಿ
ಕರಡವ ಕೊಯ್ಸುವಂತೆ-
ಹಿಂದೆ ಮೆದೆಯಿಲ್ಲ !
ಮುಂದೆ ಹುಲ್ಲಿಲ್ಲ !!
ಅಂಗ-ಲಿಂಗವೆಂಬನ್ನಕ್ಕರ ಫಲದಾಯಕ,
ಲಿಂಗೈಕ್ಯವದು ಬೇಱೆ ಗುಹೇಶ್ವರ.

೧೧೭.
ಎನ್ನ ಮನದ ಕೊನೆಯ ಮೊನೆಯ ಮೇಲೆ
ಅಂಗವಿಲ್ಲದ ರೂಪನ ಕಂಡು ಮರುಳಾದೆನವ್ವ !
ಆತನ ಕಂಡು ಬೆಱಗಾದೆನವ್ವ-
ಎನ್ನಂತರಂಗದ ಆತುಮನೊಳಗೆ
ಅನಿಮಿಷನಿಜೈಕ್ಯ ಗುಹೇಶ್ವರನ ಕಂಡು !

೧೧೮.
ಮನದ ಸುಖವ ಕಂಗಳಿಗೆ ತಂದರೆ
ಕಂಗಳ ಸುಖವ ಮನಕ್ಕೆ ತಂದರೆ
ನಾಚಿತ್ತು, ಮನ ನಾಚಿತ್ತು !
ಸ್ಥಾನಪಲ್ಲಟವಾದಡೆ
ವ್ರತಕ್ಕೆ ಭಂಗ ಗುಹೇಶ್ವರ.

೧೧೯.
ಎನಗೊಂದು ಲಿಂಗ
ನಿನಗೊಂದು ಲಿಂಗ
ಮನೆಗೊಂದು ಲಿಂಗವಾಯಿತ್ತು !
ಹೋಯಿತ್ತಲ್ಲಾ ಭಕ್ತಿ ಜಲವ ಕೂಡಿ !
ಉಳಿ ಮುಟ್ಟಿದ ಲಿಂಗವ
ಮನ ಮುಟ್ಟಬಲ್ಲುದೇ ಗುಹೇಶ್ವರ ?

೧೨೦.
ಅರಳಿಯ ಮರದ ಮೇಲೆ
ಒಂದು ಹಂಸೆ ಗೂಡನಿಕ್ಕಿತ್ತ ಕಂಡೆ !
ಆ ಗೂಡಿನೊಳಗೊಬ್ಬ ಹೆಂಗೂಸು
ಉಯ್ಯಾಲೆಯಾಡುತ್ತಿದ್ದಳು.
ಉಯ್ಯಾಲೆ ಹಱಿದು
ಹೆಂಗೂಸು ನೆಲಕ್ಕೆ ಬಿದ್ದು ಸತ್ತಡೆ
ಪ್ರಾಣಲಿಂಗವ ಕಾಣಬಹುದು ಕಾಣಾ ಗುಹೇಶ್ವರ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...