Skip to main content

ಅಲ್ಲಮಪ್ರಭುವಿನ ವಚನಗಳು : 81 ರಿಂದ 90

ಅಲ್ಲಮಪ್ರಭುವಿನ ವಚನಗಳು : 81 ರಿಂದ 90

೮೧.
ಮಜ್ಜನಕ್ಕೆಱೆವರೆಲ್ಲಾ ಇದ್ದಲ್ಲಿ ಫಲವೇನು ?
ಮುದ್ರೆಧಾರಿಗಳಪ್ಪರಯ್ಯ !
ಲಿಂಗದಲ್ಲಿ ನಿಷ್ಠೆಯಿಲ್ಲ
ಜಂಗಮದಲ್ಲಿ ಪ್ರೇಮಿಗಳಲ್ಲ
ವೇಷಲಾಂಛನಧಾರಿಗಳಪ್ಪರಯ್ಯ !
ನೋಡಿ ಮಾಡುವ ಭಕ್ತಿ ಸಜ್ಜನಸಾರಾಯವಲ್ಲ
ಗುಹೇಶ್ವರ ಮೆಚ್ಚನಯ್ಯ !
೮೨.
ಕೊಟ್ಟ ಕುದುರೆಯನೇಱಲಱಿಯದೆ
ಮತ್ತೊಂದು ಕುದುರೆಯ ಬಯಸುವರು
ವೀರರೂ ಅಲ್ಲ ! ಧೀರರೂ ಅಲ್ಲ !!
ಇದು ಕಾರಣ
ನೆಱೆ ಮೂಱು ಲೋಕವೆಲ್ಲವೂ
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ
ಗುಹೇಶ್ವರನೆಂಬ ಲಿಂಗವನವರೆತ್ತಬಲ್ಲರೋ ?
೮೩.
ಜೀವವಿಲ್ಲದ ಹೆಣನ ಹಿಡಿದಾರುವರಯ್ಯ
ಪ್ರತಿಯಿಲ್ಲದ ಪ್ರತಿಗೆ ಪ್ರತಿಯ ಮಾಡುವರಯ್ಯ
ಶಿರವಿಲ್ಲದ ಮುಂಡಕ್ಕೆ ಸೇಸೆಯನಿಕ್ಕುವರು ಗುಹೇಶ್ವರ !
೮೪.
ಆದ್ಯರಲ್ಲ ! ವೇದ್ಯರಲ್ಲ !
ಸಾಧ್ಯರಲ್ಲದ ಹಿರಿಯರ ನೋಡಾ !
ತನುವಿಕಾರ ! ಮನವಿಕಾರ !
ಇಂದ್ರಿಯವಿಕಾರದ ಹಿರಿಯರ ನೋಡಾ !
ಶಿವಚಿಂತೆ ಶಿವಜ್ಞಾನಿಗಳ ಕಂಡರೆ
ಅಳವಾಡಿ ನುಡಿವರು
ಗುಹೇಶ್ವರನಱಿಯದ ಕರ್ಮಿಗಳಯ್ಯ !
೮೫.
ಆಳವಱಿಯದ ಭಾಷೆ
ಬಹುಕುಳವಾದ ನುಡಿ
ಇಂತೆರಡಱ ನುಡಿ ಹುಸಿಯಯ್ಯ !
ಬಹುಭಾಷಿತರು, ಸುಭಾಷಿತವರ್ಜಿತರು
"ಶರಣಸತಿ ಲಿಂಗಪತಿ" ಎಂಬರು
ಹುಸಿಯಯ್ಯ !
ಇಂತಪ್ಪವರ ಕಂಡು ನಾಚಿದೆನಯ್ಯ ಗುಹೇಶ್ವರ.
೮೬.
ದೇಶ ಗುಱಿಯಾಗಿ
ಲಯವಾಗಿ ಹೋದವರ ಕಂಡೆ !
ತಮಂಧ ಗುಱಿಯಾಗಿ
ಲಯವಾಗಿ ಹೋದವರ ಕಂಡೆ !
ಕಾಮ ಗುಱಿಯಾಗಿ
ಬೆಂದುಹೋದವರ ಕಂಡೆ !
ನೀ ಗುಱಿಯಾಗಿ
ಲಯವಾಗಿ ಹೋದವರನಾರನೂ ಕಾಣೆ ಗುಹೇಶ್ವರ.
೮೭.
ಮರನೊಳಗಣ ಪತ್ರೆ ಫಲಂಗಳು
ಮರ ಕಾಲವಶದಲ್ಲಿ ತೋರುವಂತೆ,
ಹರನೊಳಗಣ ಪ್ರಕೃತಿಸ್ವಭಾವಂಗಳು
ಹರಭಾವದಿಚ್ಚೆಗೆ ತೋಱುವವು !
ಲೀಲೆಯಾದಡುಮಾಪತಿ
ಲೀಲೆ ತಪ್ಪಿದಡೆ ಸ್ವಯಂಭು ಗುಹೇಶ್ವರ.
೮೮.
ಓಡಿನೊಳಗುಂಟೆ ಕನ್ನಡಿಯ ನೋಟ ?
ಮರುಳಿನ ಕೂಟ ವಿಪರೀತಚರಿತ್ರ !
ನೋಟದ ಸುಖ ತಾಗಿ ಕೋಟಲೆಗೊಂಡೆನು
ಗುಹೇಶ್ವರನೊಬ್ಬನೆ ಅಚಳ
ಉಳಿದವರೆಲ್ಲರೂ ಸೂತಕಿಗಳು.
೮೯.
ಸತಿ ಭಕ್ತೆಯಾದಡೆ ಹೊಲೆಗಂಜಲಾಗದು.
ಪತಿ ಭಕ್ತನಾದಡೆ ಕುಲಕಂಜಲಾಗದು.
ಸತಿ-ಪತಿಯೆಂಬ ಅಂಗಸುಖ ಹಿಂಗಿ
ಲಿಂಗವೆ ಪತಿಯಾದ ಬಳಿಕ
ಸತಿಗೆ ಪತಿಯುಂಟೆ?
ಪತಿಗೆ ಸತಿಯುಂಟೆ?
ಪಾಲುಂಡು ಮೇಲುಂಬರೇ ಗುಹೇಶ್ವರ ?!
೯೦.
ಪಂಚೇಂದ್ರಿಯ ಸಪ್ತಧಾತುವನತಿಗಳೆದಲ್ಲಿ
ಘನವೇನೋ ?
ಕಾಮ-ಕ್ರೋಧ-ಲೋಭ-ಮೋಹ-
ಮದ-ಮತ್ಸರವಿಷಯವನತಿಗಳೆದಲ್ಲಿ
ಫಲವೇನೋ ?
ಇವೆಲ್ಲವ ಕೊಂದ ಪಾಪ ನಿಮ್ಮ ತಾಗುವುದು,
ಗುಹೇಶ್ವರ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...