೧೬೧.
ಸಿರಿ ಬಲ ಉಳ್ಳಾಗ | ಮರೆಯದವನೇ ಜಾಣ
ಕೊರತೆಯಾದಾಗ ಕೊಡುವೆನಿದ್ದರೆ ಎಂದು
ಅರಚುವವನೆ ಹೆಡ್ಡ ಸರ್ವಜ್ಞ
೧೬೨.
ನಿತ್ಯ ನೀರೊಳು ಮುಳುಗಿ | ಹತ್ಯಾನೆ ಸ್ವರ್ಗಕ್ಕೆ
ಹತ್ತೆಂಟು ಕಾಲ ಜಲದೊಳಗಿಹ ಕಪ್ಪೆ
ಹತ್ತವ್ಯಾಕಯ್ಯ ಸರ್ವಜ್ಞ
೧೬೩.
ಅನ್ನ ದೇವರ ಮುಂದೆ | ಇನ್ನು ದೇವರು ಉಂಟೆ
ಅನ್ನವಿರುವನಕ ಪ್ರಾಣವು - ಜಗದೊಳ
ಗನ್ನವೇ ದೈವ ಸರ್ವಜ್ಞ
೧೬೪.
ನಂಬು ಪರಶಿವನೆಂದು | ನಂಬು ಗುರುಚರಣವನು
ನಂಬಲಗಸ್ತ್ಯ ಕುಡಿದನು - ಶರಧಿಯನು
ನಂಬು ಗುರುಪದವ ಸರ್ವಜ್ಞ
೧೬೫.
ಬಂಧುಗಳಾದವರು ಮಿಂದುಂಡು ಹೋಹರು
ಬಂಧನವ ಕಳೆಯಲರಿಯರು - ಗುರುವಿಂದ
ಬಂಧನವಳಿಗು ಸರ್ವಜ್ಞ
೧೬೬.
ಮೆಟ್ಟಿಪ್ಪುದಾಶೆಯನು | ಕಟ್ಟಿಪ್ಪುದಿಂದ್ರಿಯವ
ತೊಟ್ಟಿಪ್ಪುದುಳ್ಳ ಸಮತೆಯನು - ಶಿವಪದವ
ಮುಟ್ಟಿಪ್ಪುದಯ್ಯ ಸರ್ವಜ್ಞ
೧೬೭.
ಚಿತ್ತೆಯ ಮಳೆ ಹೊಯ್ದು | ಮುತ್ತಾಗಬಲ್ಲುದೆ
ಚಿತ್ತದ ನೆಲೆಯನರಿಯದೆ - ಬೋಳಾದ
ರೆತ್ತಣ ಯೋಗ ಸರ್ವಜ್ಞ
೧೬೮.
ಇಂದ್ರಿಯವ ತೊರೆದಾತ | ವಂದ್ಯನು ಜಗಕೆಲ್ಲ
ಬಿಂದುವಿನ ಬೇಧವರಿದ ಮಹಾತ್ಮನು
ಬೆಂದ ನುಲಿಯಂತೆ ಸರ್ವಜ್ಞ
೧೬೯.
ಜ್ಞಾನಿ ಸಂಸಾರದೊಳು | ತಾನಿರಬಲ್ಲನು
ಭಾನು ಮಂಡಲದಿ ಹೊಳೆವಂತೆ - ನಿರ್ಲೇಪ
ಏನಾದಡೇನು ಸರ್ವಜ್ಞ
೧೭೦.
ಸತ್ಯವ ನುಡಿವಾತ | ಸತ್ತವನೆನಬೇಡ
ಹೆತ್ತ ತಾಯ್ ಮಗನ ಕರೆವಂತೆ - ಸ್ವರ್ಗದವ
ರಿತ್ತ ಬಾಯೆಂಬ ಸರ್ವಜ್ಞ
ಸಿರಿ ಬಲ ಉಳ್ಳಾಗ | ಮರೆಯದವನೇ ಜಾಣ
ಕೊರತೆಯಾದಾಗ ಕೊಡುವೆನಿದ್ದರೆ ಎಂದು
ಅರಚುವವನೆ ಹೆಡ್ಡ ಸರ್ವಜ್ಞ
೧೬೨.
ನಿತ್ಯ ನೀರೊಳು ಮುಳುಗಿ | ಹತ್ಯಾನೆ ಸ್ವರ್ಗಕ್ಕೆ
ಹತ್ತೆಂಟು ಕಾಲ ಜಲದೊಳಗಿಹ ಕಪ್ಪೆ
ಹತ್ತವ್ಯಾಕಯ್ಯ ಸರ್ವಜ್ಞ
೧೬೩.
ಅನ್ನ ದೇವರ ಮುಂದೆ | ಇನ್ನು ದೇವರು ಉಂಟೆ
ಅನ್ನವಿರುವನಕ ಪ್ರಾಣವು - ಜಗದೊಳ
ಗನ್ನವೇ ದೈವ ಸರ್ವಜ್ಞ
೧೬೪.
ನಂಬು ಪರಶಿವನೆಂದು | ನಂಬು ಗುರುಚರಣವನು
ನಂಬಲಗಸ್ತ್ಯ ಕುಡಿದನು - ಶರಧಿಯನು
ನಂಬು ಗುರುಪದವ ಸರ್ವಜ್ಞ
೧೬೫.
ಬಂಧುಗಳಾದವರು ಮಿಂದುಂಡು ಹೋಹರು
ಬಂಧನವ ಕಳೆಯಲರಿಯರು - ಗುರುವಿಂದ
ಬಂಧನವಳಿಗು ಸರ್ವಜ್ಞ
೧೬೬.
ಮೆಟ್ಟಿಪ್ಪುದಾಶೆಯನು | ಕಟ್ಟಿಪ್ಪುದಿಂದ್ರಿಯವ
ತೊಟ್ಟಿಪ್ಪುದುಳ್ಳ ಸಮತೆಯನು - ಶಿವಪದವ
ಮುಟ್ಟಿಪ್ಪುದಯ್ಯ ಸರ್ವಜ್ಞ
೧೬೭.
ಚಿತ್ತೆಯ ಮಳೆ ಹೊಯ್ದು | ಮುತ್ತಾಗಬಲ್ಲುದೆ
ಚಿತ್ತದ ನೆಲೆಯನರಿಯದೆ - ಬೋಳಾದ
ರೆತ್ತಣ ಯೋಗ ಸರ್ವಜ್ಞ
೧೬೮.
ಇಂದ್ರಿಯವ ತೊರೆದಾತ | ವಂದ್ಯನು ಜಗಕೆಲ್ಲ
ಬಿಂದುವಿನ ಬೇಧವರಿದ ಮಹಾತ್ಮನು
ಬೆಂದ ನುಲಿಯಂತೆ ಸರ್ವಜ್ಞ
೧೬೯.
ಜ್ಞಾನಿ ಸಂಸಾರದೊಳು | ತಾನಿರಬಲ್ಲನು
ಭಾನು ಮಂಡಲದಿ ಹೊಳೆವಂತೆ - ನಿರ್ಲೇಪ
ಏನಾದಡೇನು ಸರ್ವಜ್ಞ
೧೭೦.
ಸತ್ಯವ ನುಡಿವಾತ | ಸತ್ತವನೆನಬೇಡ
ಹೆತ್ತ ತಾಯ್ ಮಗನ ಕರೆವಂತೆ - ಸ್ವರ್ಗದವ
ರಿತ್ತ ಬಾಯೆಂಬ ಸರ್ವಜ್ಞ
Comments
Post a Comment