Skip to main content

ಬಸವಣ್ಣನ ವಚನಗಳು - 221 ರಿಂದ 230 ರವರೆಗೆ

೨೨೧.
ಮೇಲಾಗಲೊಲ್ಲೆ ಕೀಳಾಗಲೊಲ್ಲದೆ!
ಕೀಳಿಂಗಲ್ಲದೆ ಹಯನು ಕರೆವುದೆ ?
ಮೇಲಾಗಿ ನರಕದಲೋಲಾಡಲಾರೆನು!
ನಿಮ್ಮ ಶರಣರ ಪಾದಕ್ಕೆ ಕೀಳಾಗಿರಿಸು
ಮಹಾದಾನಿ ಕೂಡಲಸಂಗಮದೇವ.
೨೨೨.
ಕಾಗೆ ವಿಷ್ಟಿಸುವ ಹೊನ್ನಕಳಶವಹುದರಿಂದ,
ಒಡೆಯರು ಜೋಗೈಸುವ ಚಮ್ಮಾವುಗೆಯ ಮಾಡಯ್ಯ.
ಅಯ್ಯ, ನಿಮ್ಮ ಶರಣರ ಪಾದಕ್ಕೆ ಚಮ್ಮಾವುಗೆಯ ಮಾಡಯ್ಯ.
"ಕರ್ಮಾವಲಂಬಿನಃ ಕೇಚಿತ್
ಕೇಚಿತ್ ಜ್ಞಾನಾವಲಂಬಿನಃ
ವಯಂತು ಶಿವಭಕ್ತಾನಾಂ
ಪಾದರಕ್ಷಾವಲಂಬಿನಃ"
ಕೂಡಲಸಂಗಮದೇವ ನಿಮ್ಮ ಸೆರಗೊಡ್ಡಿ ಬೇಡುವೆನು
ಇದೊಂದೇ ವರವ ಕರುಣಿಸಯ್ಯ.
೨೨೩.
ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ,
ಅಂಬುಜಕ್ಕೆ ಭಾನುವಿನ ಉದಯದ ಚಿಂತೆ.
ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ.
ಎನಗೆ ನಮ್ಮ ಕೂಡಲಸಂಗಮದೇವರ
ನೆನೆವುದೇ ಚಿಂತೆ!
೨೨೪.
ಹೊಲಬುಗೆಟ್ಟ ಶಿಶು ತನ್ನ ತಾಯನರಸುವಂತೆ,
ಬಳಿದಪ್ಪಿದ ಪಶು ತನ್ನ ಹಿಂಡನರಸುವಂತೆ,
ಬಯಸುತ್ತಿದ್ದೆನಯ್ಯ ನಿಮ್ಮ ಭಕ್ತರ ಬರವನು!
ಬಯಸುತ್ತಿದ್ದೆನಯ್ಯ ನಿಮ್ಮ ಶರಣರ ಬರವನು!
ದಿನಕರನುದಯಕ್ಕೆ ಕಮಳ ವಿಕಸಿತವಾದಂತೆ
ಎನಗೆ ನಿಮ್ಮ ಶರಣರ ಬರವು ಕೂಡಲಸಂಗಮದೇವ.
೨೨೫.
ಸೂರ್ಯನುದಯ ತಾವರೆಗೆ ಜೀವಾಳ!
ಚಂದ್ರಮನುದಯ ನೈದಿಲೆಗೆ ಜೀವಾಳ!
ಕೂಪರ ಠಾವಿನಲ್ಲಿ ಕೂಟ-ಜೀವಾಳವಯ್ಯ.
ಒಲಿದ ಠಾವಿನಲ್ಲಿ ನೋಟ-ಜೀವಾಳವಯ್ಯ.
ಕೂಡಲಸಂಗನ ಶರಣರ ಬರವೆನಗೆ
ಪ್ರಾಣ-ಜೀವಾಳವಯ್ಯ.
೨೨೬.
ಕಂಡರೆ ಮನೋಹರವಯ್ಯ,
ಕಾಣದಿದ್ದರೆ ಅವಸ್ಥೆ ನೋಡಯ್ಯ.
ಹಗಲು ಇರುಳಹುದು; ಇರುಳು ಹಗಲಹುದು.
ಇರುಳು ಹಗಲೊಂದು
ಜುಗ ಮೇಲೆ ಕೆಡೆದಂತೆ ಇಹುದು.
ಕೂಡಲಸಂಗನ ಶರಣರನಗಲುವ ಧಾವತಿಯಿಂದ
ಮರಣವೇ ಲೇಸು ಕಂಡಯ್ಯ.
೨೨೭.
ಅಂಗೈ ತಿಂದುದು, ಎನ್ನ ಕಂಗಳು ಕೆತ್ತಿಹವಯ್ಯ.
ಬಂದಹರಯ್ಯ ಪುರಾತರೆನ್ನ ಮನೆಗೆ!
ಬಂದಹರಯ್ಯ ಶರಣರೆನ್ನ ಮನೆಗೆ!
ಕಂಡ ಕನಸು ದಿಟವಾಗಿ,
ಜಂಗಮ ಮನೆಗೆ ಬಂದರೆ
ಶಿವಾರ್ಚನೆಯ ಮಾಡಿಸುವೆ
ಕೂಡಲಸಂಗಮದೇವಾ ನಿಮ್ಮ ಮುಂದೆ.
೨೨೮.
ಗಿಳಿಯ ಪಂಜರವಿಕ್ಕಿ, ಸೊಡರಿಗೆಣ್ಣೆಯನೆರೆದು,
ಬತ್ತಿಯನಿಕ್ಕಿ ಬರವ ಹಾರುತ್ತಿದ್ದೆನೆಲೆಗವ್ವ!
ತರಗೆಲೆ ಗಿರಕಂದರೆ, ಹೊರಗನಾಲಿಸುವೆ.
ಅಗಲಿದೆನೆಂದೆನ್ನ ಮನ ಧಿಗಿಲೆಂದಿತ್ತೆಲೆಗವ್ವ.
ಕೂಡಲಸಂಗನ ಶರಣರು ಬಂದು
ಬಾಗಿಲ ಮುಂದೆ ನಿಂದು
'ಶಿವಾ' ಎಂದರೆ ಸಂತೋಷಪಟ್ಟೆನೆಲೆಗವ್ವ.
೨೨೯.
ಅಡವಿಯಲೊಬ್ಬ ಕಡುನೀರಡಸಿ
ಎಡೆಯಲ್ಲಿ ನೀರ ಕಂಡಂತಾಯಿತಯ್ಯ!
ಕುರುಡ ಕಣ್ಣ ಪಡೆದಂತಾಯಿತಯ್ಯ!
ಬಡವ ನಿಧಾನವ ಪಡೆದಂತಾಯಿತಯ್ಯ!
ನಮ್ಮ ಕೂಡಲಸಂಗನ ಶರಣರ
ಬರವೆನ್ನ ಪ್ರಾಣ ಕಂಡಯ್ಯ.
೨೩೦.
ಇಂದೆನ್ನ ಮನೆಗೆ ಪ್ರಮಥರು ಬಂದಾರೆಂದು,
ಗುಡಿ, ತೋರಣವ ಕಟ್ಟಿ;
ಪಡುಸಮ್ಮಾರ್ಜನೆಯ ಮಾಡಿ
ರಂಗವಾಲಿಯನಿಕ್ಕಿ
ಉಘೇ, ಚಾಂಗು, ಭಲಾ, ಎಂಬೆ!
ಕೂಡಲಸಂಗನ ಶರಣರು
ತಮ್ಮ ಒಕ್ಕುದನಿಕ್ಕಿ ಸಲಹುವರಾಗಿ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...