Skip to main content

ಬಸವಣ್ಣನ ವಚನಗಳು - 231 ರಿಂದ 240 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.

೨೩೧.
ಸಾಸವೆಯ ಮೇಲೆ ಸಾಗರವರಿದಂತಾಯಿತಯ್ಯ!
ಆನಂದದಿಂದ ನಲಿನಲಿದಾಡುವೆನು.
ಆನಂದದಿಂದ ಕುಣಿಕುಣಿದಾಡುವೆನು.
ಕೂಡಲಸಂಗನ ಶರಣರು ಬಂದರೆ
ಉಬ್ಬಿಕೊಬ್ಬಿ ಹರುಷದಲೋಲಾಡುವೆನು.
೨೩೨.
ಎಳ್ಳಿಲ್ಲದ ಗಾಣವನಾಡಿದ
ಎತ್ತಿನಂತಾಯಿತ್ತೆನ್ನ ಭಕ್ತಿ!
ಉಪ್ಪ ಅಪ್ಪುವಿನಲ್ಲಿ ಅದ್ದಿ
ಮೆಲಿದಂತಾಯಿತ್ತೆನ್ನ ಭಕ್ತಿ!
ಕೂಡಲಸಂಗಮದೇವ,
ಅನು ಮಾಡಿದೆನೆಂಬೀ ಕಿಚ್ಚು ಸಾಲದೆ ?
೨೩೩.
ಧ್ಯಾನಮೌನವೆಂಬ ಶಸ್ತ್ರವ ಹಿಡಿಯಲಾರದೆ
ಅಹಂಕಾರಧಾರೆಯ ಮೊನೆಯಲಗೆಂಬ ಶಸ್ತ್ರವ ಹಿಡಿದು ಕೆಟ್ಟೆನಯ್ಯ!
ಅಂಜುವೆನಂಜುವೆನಯ್ಯ!
ಜಂಗಮ-ಲಿಂಗವೆಂಬ ಭಾಷೆ ಪಲ್ಲಟವಾಯಿತ್ತು!
ಇನ್ನು-ಜಂಗಮಲಿಂಗವೆಂಬ ಶಿಕ್ಷಾಶಸ್ತ್ರದಲ್ಲಿ,
ಎನ್ನ ಹೊಯ್ದು ಬಯ್ದು ರಕ್ಷಿಸುವುದು ಕೂಡಲಸಂಗಮದೇವ!
೨೩೪.
ಎನ್ನಲ್ಲಿ ಭಕ್ತಿ ಸಾಸವೆಯ ಷಡ್ಭಾಗದಿನಿತಿಲ್ಲ;
ಎನ್ನ ಭಕ್ತನೆಂಬರು; ಎನ್ನ ಸಮಯಾಚಾರಿ ಎಂದೆಂಬರು.
ನಾನೇನು ಪಾಪವ ಮಾಡಿದೆನೋ!
ಬೆಳೆಯದ ಮುನ್ನವೇ ಮೊಳೆಯ ಕೊಯ್ವರೆ ಹೇಳಯ್ಯ ?
ಇರಿಯದ ವೀರ ಇಲ್ಲದ ಸೊಬಗುವ
ಎಲ್ಲ ಒಡೆಯರು ಏರಿಸಿ ನುಡಿವರು!
ಎನಗಿದು ವಿಧಿಯೇ ಕೂಡಲಸಂಗಮದೇವ ?
೨೩೫.
ಎನ್ನವರೆನಗೊಲಿದು ಹೊನ್ನಶೂಲದಲ್ಲಿಕ್ಕಿದರೆನ್ನ
ಹೊಗಳಿ ಹೊಗಳಿ!
ಎನ್ನ ಹೊಗಳತೆ ಎನ್ನನಿಮ್ಮೈಗೊಂಡಿತಲ್ಲ!
ಅಯ್ಯೋ ನಿಮ್ಮ ಮನ್ನಣೆಯೆ
ಮಸೆದಲಗಾಗಿ ತಾಗಿತ್ತಲ್ಲ!
ನೊಂದೆನು, ಸೈರಿಸಲಾರೆನು-ಕೂಡಲಸಂಗಮದೇವ,
ನೀನೆನಗೊಳ್ಳಿದನಾದರೆ,
ಎನ್ನ ಹೊಗಳತೆಗಡ್ಡ ಬಾರಾ ಧರ್ಮೀ.
೨೩೬.
ಎನ್ನವರೆನಗೊಲಿದು ಹೊನ್ನಶೂಲದಲ್ಲಿಕ್ಕಿದರೆನ್ನ!
ಅಹಂಕಾರ ಪೂರಾಯ ಗಾಯದಲ್ಲಿ
ಆನೆಂತು ಬದುಕುವೆನೆಂತು ಜೀವಿಸುವೆ!
ಜಂಗಮವಾಗಿ ಬಂದು ಜರಿದು
ಶೂಲವನಿಳುಹಿ, ಪ್ರಸಾದದ ಮದ್ದನಿಕ್ಕಿ
ಸಲಹು ಕೂಡಲಸಂಗಮದೇವ.
೨೩೭.
ಹೊಯ್ದವರೆನ್ನ ಹೊರೆದವರೆಂಬೆ,
ಬಯ್ದವರೆನ್ನ ಬಂಧುಗಳೆಂಬೆ.
ನಿಂದಿಸಿದವರೆನ್ನ ತಂದೆತಾಯಿಗಳೆಂಬೆ!
ಆಳಿಗೊಂಡವರೆನ್ನ ಆಳ್ದರೆಂಬೆ.
ಜರಿದವರೆನ್ನ ಜನ್ಮಬಂಧುಗಳೆಂಬೆ.
ಹೊಗಳಿದವರೆನ್ನ ಹೊನ್ನಶೂಲದಲಿಕ್ಕಿದವರು
ಕೂಡಲಸಂಗಮದೇವ.
೨೩೮.
ಎಡದ ಕೈಯಲು ಹಾಲ ಬಟ್ಟಲು
ಬಲದ ಕೈಯಲು ಓಜುಗಟ್ಟಿಗೆ!
ಆವಾಗ ಬಂದಾನೆಮ್ಮಯ್ಯ
ಬಡಿದು ಹಾಲು ಕುಡಿಸುವ ತಂದೆ! ?
"ದಂಡಕ್ಷೀರದ್ವಯೀಹಸ್ತಂ
ಜಂಗಮಂ ಭಕ್ತಿಮಂದಿರಂ |
ತದ್‌ಭಕ್ತ್ಯಾ ಲಿಂಗಸಂತುಷ್ಟಿಃ
ಅಪಹಾಸಾಚ್ಚ ದಂಡನಂ ||"
ಎಂದುದಾಗಿ ಕೂಡಲಸಂಗಮದೇವಯ್ಯ
ತಾನೇ ಭಕ್ತಿಪಥವ ತೋರುವ ತಂದೆ.
೨೩೯.
ಕೃತಯುಗದಲ್ಲಿ ಕೇತಾರವೆಂಬ ಮೂಲಸ್ಥಾನ;
ತ್ರೇತಾಯುಗದಲ್ಲಿ ವಾರಣಾಸಿ ಎಂಬ ಮೂಲಸ್ಥಾನ;
ದ್ವಾಪರಯುಗದಲ್ಲಿ ವಿರೂಪಾಕ್ಷವೆಂಬ ಮೂಲಸ್ಥಾನ;
ಕಲಿಯುಗದಲ್ಲಿ ಪರ್ವತವೆಂಬ ಮೂಲಸ್ಥಾನ;
ನಾ-ನಾ ಸ್ಥಾನವ ಮೆಟ್ಟಿದೆ
ಜಂಗಮವೇ ಲಿಂಗವೆಂದು ನಂಬಿದೆ
ಕೂಡಲಸಂಗಮದೇವ.
೨೪೦.
ಭಕ್ತದೇಹೀಕದೇವನಪ್ಪ ದೇವನು
ಸದ್ಭಕ್ತರ ಬಳಿಯಲ್ಲಿ ಬಪ್ಪನಾಗಿ,
ಆಳ್ದನು ಬರಲಾಳು ಮಂಚದ ಮೇಲೆ
ಇಪ್ಪುದು ಗುಣವೇ ಹೇಳಾ
ಕೂಡಲಸಂಗಮದೇವ ?
ಜಂಗಮರೂಪವಾಗಿ ಸಂಗಯ್ಯ ಬಂದಾನೆಂದು
ಎಂದೆಂದೂ ನಾನು ಮಂಚವನೇರದ ಭಾಷೆ!

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...