Skip to main content

ಬಸವಣ್ಣನ ವಚನಗಳು - 281 ರಿಂದ 290 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೨೮೧.
ಎನ್ನ ಜನ್ಮವ ತೊಡೆದ ನೀ ಧರ್ಮಿ!
ಎನ್ನ ಜನ್ಮವನತಿಗಳೆದ ನೀ ಧರ್ಮಿ!
ಎನ್ನ ಭವಬಂಧನವ ನೀಕರಿಸಿದೆಯಾಗಿ
ಶಿವನೇ ಗತಿಯೆಂದು ನಂಬಿದೆನಯ್ಯ.
ಎನ್ನಷ್ಟಮದಂಗಳ ಸುಟ್ಟುರುಹಿದೆಯಾಗಿ
ಕಟ್ಟುಗ್ರದಿಂದ ನಿಮ್ಮ ಶ್ರೀಚರಣವ ಕಂಡೆ.
ಸೃಷ್ಟಿಪ್ರತಿಪಾಲಕ ನಿಮ್ಮ ನಾ ನಂಬಿದೆ
ಕರುಣಿಸು ಕೂಡಲಸಂಗಮದೇವ.
೨೮೨.
ಭವರೋಗವೈದ್ಯನೆಂದು ನಾ ನಿಮ್ಮ ಮರೆವೊಕ್ಕೆ,
ಭಕ್ತಿದಾಯಕ ನೀನು, ಕರುಣಿಸು ಲಿಂಗತಂದೆ.
ಜಯ ಜಯ ಶ್ರೀ ಮಹಾದೇವ,
ಜಯ ಜಯ ಶ್ರೀ ಮಹಾದೇವ,
ಎನುತಿದ್ದಿತೆನ್ನ ಮನವು;
ಕೂಡಲಸಂಗಮದೇವಂಗೆ
ಶರಣೆನುತಿದ್ದಿತೆನ್ನ ಮನವು.
೨೮೩.
ಅಂಗೈಯೊಳಗಣ ಲಿಂಗವ ನೋಡುತ್ತ
ಕಂಗಳು ಕಡೆಗೋಡಿವರಿವುತ್ತ ಸುರಿವುತ್ತ ಎಂದಿಪ್ಪೆನೋ ?!
ನೋಟವೇ ಪ್ರಾಣವಾಗಿ ಎಂದಿಪ್ಪೆನೋ!
ಕೂಟವೇ ಪ್ರಾಣವಾಗಿ ಎಂದಿಪ್ಪೆನೋ!
ಎನ್ನಂಗ ವಿಕಾರದ ಸಂಗವಳಿದು
ಕೂಡಲಸಂಗಯ್ಯ ಲಿಂಗಯ್ಯ ಲಿಂಗವೆನುತ್ತ ಎಂದಿಪ್ಪೆನೋ !?
೨೮೪.
ಎದೆ ಬಿರಿವನ್ನಕ, ಮನ ದಣಿವನ್ನಕ
ನಾಲಗೆ ನಲಿನಲಿದೋಲಾಡುವನ್ನಕ
ನಿಮ್ಮ ನಾಮಾಮೃತವ ತಂದಿರಿಸು ಕಂಡ
ಎಲೆ ಹರನೆ
ಎಲೆ ಶಿವನೆ!
ನಿಮ್ಮ ನಾಮಾಮೃತವ ತಂದಿರಿಸು ಕಂಡಾ
ಬಿರಿಮುಗುಳಂತೆ ಎನ್ನ ಹೃದಯ
ನಿಮ್ಮ ಶ್ರೀಚರಣದ ಮೇಲೆ ಬಿದ್ದರಳುಗೆ
ಕೂಡಲಸಂಗಮದೇವ.
೨೮೫.
ಆಡಿ ಕಾಲು ದಣಿಯದು
ನೋಡಿ ಕಣ್ಣು ದಣಿಯದು,
ಹಾಡಿ ನಾಲಗೆ ದಣಿಯದು,
ಇನ್ನೇವೆನಿನ್ನೇವೆ!
ನಾ ನಿಮ್ಮ ಕಯ್ಯಾರೆ ಪೂಜಿಸಿ
ಮನ ದಣಿಯಲೊಲ್ಲದು
ಇನ್ನೇವೆನಿನ್ನೇವೆ!
ಕೂಡಲಸಂಗಮದೇವಯ್ಯ,
ನಿಮ್ಮ ಉದರವ ಬಗಿದಾನು ಹೊಗುವ ಭರವೆನಗೆ!
೨೮೬.
ಕಾಮಸಂಗ ನಿಸ್ಸಂಗವಾಗಿ
ಇನ್ನಾವ ಸಂಗವನರಿಯೆನಯ್ಯ.
ಮಿಗೆ ಒಲಿದೆನಾಗಿ ಅಗಲಲಾರೆ:
ನಗೆಮೊಗದರಸ ಅವಧಾರು! ಕೂಡಲಸಂಗಮದೇವ,
ಬಗಿದು ಹೊಗುವೆ ನಾ ನಿಮ್ಮ ಮನವನು.
೨೮೭.
ವಾರವೆಂದರಿಯೆ, ದಿನವೆಂದರಿಯೆ!
ಏನೆಂದರಿಯೆನಯ್ಯ.
ನಾನು ಇರುಳೆಂದರಿಯೆ, ಹಗಲೆಂದರಿಯೆ!
ಏನೆಂದರಿಯೆನಯ್ಯ.
ನಾನು ನಿಮ್ಮುವ ಪೂಜಿಸಿ, ಎನ್ನುವ ಮರೆದೆನು
ಕೂಡಲಸಂಗಮದೇವ.
೨೮೮.
ನಿಮ್ಮ ನೋಟವನಂತಸುಖ.
ನಿಮ್ಮ ಕೂಟ ಪರಮಸುಖ.
ಅಷ್ಟಕೋಟಿರೋಮಂಗಳೆಲ್ಲ
ಕಂಗಳಾಗಿ ನೋಡುತ್ತಿದ್ದೆನು.
ಕೂಡಲಸಂಗಮದೇವಯ್ಯ,
ನಿಮ್ಮ ನೋಡಿ ನೋಡಿ
ಎನ್ನ ಮನದಲ್ಲಿ ರತಿ ಹುಟ್ಟಿ,
ನಿಮಿರ್ದವೆನ್ನ ಕಳೆಗಳು.
೨೮೯.
ವಚನದಲ್ಲಿ ನಾಮಾಮೃತ ತುಂಬಿ.
ನಯನದಲ್ಲಿ ನಿಮ್ಮ ಮೂರುತಿ ತುಂಬಿ,
ಮನದಲ್ಲಿ ನಿಮ್ಮ ನೆನಹು ತುಂಬಿ;
ಕಿವಿಯಲ್ಲಿ ನಿಮ್ಮ ಕೀರುತಿ ತುಂಬಿ;
ಕೂಡಲಸಂಗಮದೇವ,
ನಿಮ್ಮ ಚರಣಕಮಲದೊಳಗಾನು ತುಂಬಿ!
೨೯೦.
ಉರಿಯೊಳಗಣ ಕರ್ಪೂರಕ್ಕೆ ಕರೆಯುಂಟೇ ಅಯ್ಯ ?
ಬಯಲು ಮರೀಚಿಕೆಯ ಜಲಕ್ಕೆ ಕೆಸರುಂಟೇ ಅಯ್ಯ ?
ವಾಯುವನಪ್ಪಿದ ಪರಿಮಳಕ್ಕೆ ನಿರ್ಮಾಲ್ಯವುಂಟೇ ಅಯ್ಯ ?
ನೀವು ನೆರೆಯೊಲಿದ ಬಳಿಕೆನಗೆ ಭವವುಂಟೇ ?
ಕೂಡಲಸಂಗಮದೇವ.
ಚರಣಕಮಲದೊಳಗೆನ್ನನಿಂಬಿಟ್ಟುಕೊಳ್ಳಯ್ಯ!

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...