Skip to main content

ಬಸವಣ್ಣನ ವಚನಗಳು - 311 ರಿಂದ 320 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೩೧೧.
ಸಕಲ-ನಿಷ್ಕಲವ ಕೂಡಿಕೊಂಡಿಪ್ಪೆಯಾಗಿ
ಸಕಲ ನೀನೆ, ನಿಷ್ಕಲ ನೀನೇ ಕಂಡಯ್ಯ!
ವಿಶ್ವತಶ್ಚಕ್ಷು ನೀನೇ ದೇವ!
ವಿಶ್ವತೋಬಾಹು ನೀನೇ ದೇವ
ವಿಶ್ವತೋಮುಖ ನೀನೇ ದೇವ!
ಕೂಡಲಸಂಗಮದೇವ.

೩೧೨.
ಎತ್ತೆತ್ತ ನೋಡಿದಡತ್ತತ್ತ ನೀನೇ ದೇವ!
ಸಕಲ ವಿಸ್ತಾರದ ರೂಹು ನೀನೇ ದೇವ.
ವಿಶ್ವತಶ್ಚಕ್ಷು ನೀನೇ ದೇವ,
ವಿಶ್ವತೋಮುಖ ನೀನೇ ದೇವ.
ವಿಶ್ವತೋಬಾಹು ನೀನೇ ದೇವ.
ವಿಶ್ವತೋಪಾದ ನೀನೇ ದೇವ.
ಕೂಡಲಸಂಗಮದೇವ.

೩೧೩.
ಹರನ ಕೊರಳಲ್ಲಿಪ್ಪ ಕರೋಟಿಮಾಲೆಯ
ಶಿರದ ಲಿಖಿತವ ಕಂಡು, ಮರುಳುತಂಡಗಳು
ಓದಿನೋಡಿ
"ಇವನಜ, ಇವ ಹರಿ, ಇವ ಸುರಪತಿ
ಇವ ಧರಣೀಂದ್ರ, ಇವನಂತಕ"ನೆಂದು
ಹರುಷದಿಂದ ಸರಸವಾಡುವುದ ಹರ ನೋಡಿ
ಮುಗುಳುನಗೆಯ ನಗುತ್ತಿದ್ದನು!
ಕೂಡಲಸಂಗಮದೇವ.

೩೧೪.
ಅದುರಿತು ಪಾದಘಾತದಿಂದ ಧರೆ!
ಬಿದಿರಿದವು ಮಕುಟ ತಾಗಿ ತಾರಕಿಗಳು
ಉದುರಿದವು ಕೈತಾಗಿ ಲೋಕಂಗಳೆಲ್ಲ!
"ಮಹೀ ಪಾದಾಘಾತಾದ್ವ್ರಜತಿ ಸಹಸಾ ಸಂಶಯಪದಂ
ಪದಂ ವಿಷ್ಣೋರ್ಭ್ರಾಮ್ಯದ್ಭುಜಪರಿಘರುಗ್ಣಗ್ರಹಗಣಂ!
ಮುಹರ್ದ್ಯೌರ್ಧ್ವಸ್ತಾತ್ಯಂತ್ಯನಿಭೃತಜಟಾತಾಟಿತತಟಾ
ಜಗದ್ರಕ್ಷಾಯೈ ತ್ವಂ ನನು ವಹಸಿ ಭೌಮಾಂ ಚ ವಿಭುತಾಂ"
ನಮ್ಮ ಕೂಡಲಸಂಗಮದೇವ
ನಿಂದು ನಾಂಟ್ಯವನಾಡೆ!

೩೧೫.
ಇಬ್ಬರು ಮೂವರು ದೇವರೆಂದು
ಉಬ್ಬಿ ಮಾತನಾಡಬೇಡ.
ದೇವನೊಬ್ಬನೇ ಕಾಣಿರೋ.
ಇಬ್ಬರೆಂಬುದು ಹುಸಿ ನೋಡಾ.
ಕೂಡಲಸಂಗಮನಲ್ಲದಿಲ್ಲೆಂದಿತ್ತು ವೇದ.

೩೧೬.
ಬಿದಿರೆಲೆಯ ಮೆಲಿದಂತಲ್ಲದೆ,
ರಸ ಪಡೆಯಲು ಬಾರದು.
ನೀರ ಕಡೆದರೆ, ಕಡೆದಂತಲ್ಲದೆ,
ಬೆಣ್ಣೆಯ ಪಡೆಯಲು ಬಾರದು.
ಮಳಲ ಹೊಸೆದರೆ, ಹೊಸೆದಂತಲ್ಲದೆ,
ಸರವಿಯ ಪಡೆಯಲು ಬಾರದು.
ನಮ್ಮ ಕೂಡಲಸಂಗಮದೇವನಲ್ಲದೆ
ಅನ್ಯ ದೈವಕ್ಕೆರಗಿದರೆ,
ಪೊಳ್ಳ ಕುಟ್ಟಿ ಕೈ ಪೋಟು ಹೋದಂತಾಯಿತ್ತಯ್ಯ!

೩೧೭.
ಆಗಳೂ ಲೋಗರ ಮನೆಯ ಬಾಗಿಲ
ಕಾಯ್ದುಕೊಂಡಿಪ್ಪವು ಕೆಲವು ದೈವಂಗಳು,
ಹೋಗೆಂದರೆ ಹೋಗವು,
ನಾಯಿಂದ ಕರಕಷ್ಟ ಕೆಲವು ದೈವಂಗಳು!
ಲೋಗರ ಬೇಡಿಕೊಂಡುಂಬ ದೈವಂಗಳು
ತಾವೇನ ಕೊಡುವವು ಕೂಡಲಸಂಗಮದೇವ.

೩೧೮.
ಹಾಳುಮೊರಡಿಗಳಲ್ಲಿ, ಊರ ದಾರಿಗಳಲ್ಲಿ;
ಕೆರೆ-ಭಾವಿ-ಹೂಗಿಡಂ-ಮರಂಗಳಲ್ಲಿ,
ಗ್ರಾಮಮಧ್ಯಂಗಳಲ್ಲಿ,
ಚೌಪಥ-ಪಟ್ಟಣ ಪ್ರವೇಶದಲ್ಲಿ, ಹಿರಿಯಾಲದ ಮರದಲ್ಲಿ
ಮನೆಯ ಮಾಡಿ,
ಕರೆವೆಮ್ಮೆ, ಹಸುಗೂಸು, ಬಸುರಿ, ಬಾಣತಿ, ಕುಮಾರಿ
ಕೊಡುಗೂಸೆಂಬರ ಹಿಡಿದುಂಬ, ತಿರಿದುಂಬ
ಮಾರಯ್ಯ, ಬೀರಯ್ಯ,
ಖೇಚರ ಗಾವಿಲ, ಅಂತರಬೆಂತರ,
ಕಾಳಯ್ಯ, ಮಾರಯ್ಯ, ಮಾಳಯ್ಯ, ಕೇತಯ್ಯಗಳೆಂಬ
ನೂರು ಮಡಕೆಗೆ ನಮ್ಮ ಕೂಡಲಸಂಗಮದೇವ
ಶರಣೆಂಬುದೊಂದು ದಡಿ ಸಾಲದೆ ?

೩೧೯.
ಅರಗು ತಿಂದರೆ ಕರಗುವ ದೈವವ,
ಉರಿಯ ಕಂಡರೆ ಮುರುಟುವ ದೈವವ,
ಎಂತು ಸರಿಯೆಂಬೆನಯ್ಯ!
ಅವಸರ ಬಂದರೆ ಮಾರುವ
ದೈವವನೆಂತು ಸರಿಯೆಂಬೆನಯ್ಯ!
ಅಂಜಿಕೆಯಾದರೆ ಹೂಳುವ
ದೈವವನೆಂತು ಸರಿಯೆಂಬೆನಯ್ಯ!
ಸಹಜಭಾವ ನಿಜೈಕ್ಯ
ಕೂಡಲಸಂಗಮದೇವನೊಬ್ಬನೇ ದೇವ.

೩೨೦.
ಮಾರಿಕವ್ವೆಯ ನೋಂತು ಕೊರಳಲ್ಲಿ ಕಟ್ಟಿಕೊಂಬರು.
ಸಾಲಬಟ್ಟರೆ ಮಾರಿಕೊಂಬರಯ್ಯ!
ಸಾಲಬಟ್ಟರೆ ಅವನೊತ್ತೆಯನಿಟ್ಟು ಕೊಂಡುಂಬರಯ್ಯ!
ಮಾರುವೋಗನೊತ್ತೆವೋಗ
ನಮ್ಮ ಕೂಡಲಸಂಗಮದೇವ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...