Skip to main content

ಬಸವಣ್ಣನ ವಚನಗಳು - 351 ರಿಂದ 360 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೩೫೧.
ತೊರೆಯ ಮೀವ ಅಣ್ಣಗಳಿರಾ,
ತೊರೆಯ ಮೀವ ಸ್ವಾಮಿಗಳಿರಾ,
ತೊರೆಯಿಂ ಭೋ, ತೊರೆಯಿಂ ಭೋ!
ಪರನಾರಿಯ ಸಂಗವ ತೊರೆಯಿಂ ಭೋ!
ಪರಧನದಾಮಿಷವ ತೊರೆಯಿಂ ಭೋ!
ಇವ ತೊರೆಯದೇ, ಹೋಗಿ ತೊರೆಯ ಮಿಂದರೆ
ಬರುದೊರೆ ಹೋಹುದು ಕೂಡಲಸಂಗಮದೇವ.

೩೫೨.
ಹುತ್ತವ ಕಂಡಲ್ಲಿ ಹಾವಾಗಿ,
ನೀರ ಕಂಡಲ್ಲಿ ಹೊಳೆಯಾದವನ ಮೆಚ್ಚುವನೆ ?
ಬಾರದ ಭವಕ್ಕೆ ಬರಿಸುವನಲ್ಲದೆ ಮೆಚ್ಚುವನೆ ?
ಅಘೋರ ನರಕವನುಣಿಸುವನಲ್ಲದೆ ಮೆಚ್ಚುವನೆ ?
ಅಟಮಟದ ಭಕ್ತರ ಕಂಡರೆ
ಕೋಟಲೆಗೊಳಿಸುವನು ಕೂಡಲಸಂಗಯ್ಯನು.

೩೫೩.
ಕುಳ್ಳಿದ್ದು ಲಿಂಗವ ಪೂಜಿಸಿ
ಅಲ್ಲದಾಟವನಾಡುವರಯ್ಯ;
ಬೆಳ್ಳೆತ್ತಿನ ಮರೆಯಲ್ಲಿದ್ದು
ಹುಲ್ಲೆಗೆ ಅಂಬ ತೊಡುವಂತೆ!
ಕಳ್ಳ-ಹಾದರಿಗರ ಕೈಯಲು ಪೂಜೆಯ ಕೊಳ್ಳ
ನಮ್ಮ ಕೂಡಲಸಂಗಮದೇವ.

೩೫೪.
ತನುಶುಚಿಯಿಲ್ಲದವನ ದೇಹಾರವೇಕೆ ?
ದೇವರು ಕೊಡನೆಂಬ ಭ್ರಾಂತೇಕೆ ?
ಮನಕ್ಕೆ ಮನವೇ ಸಾಕ್ಷಿ ಸಾಲದೆ ಲಿಂಗ ತಂದೆ ?!
ಹೇಂಗೆ ಮನ ಹಾಂಗೆ ಘನ!
ತಪ್ಪದು ಕೂಡಲಸಂಗಮದೇವ.

೩೫೫.
ನೂರನೋದಿ ನೂರ ಕೇಳಿದರೇನು ?
ಆಶೆ ಹರಿಯದು, ರೋಷ ಬಿಡದು!
ಮಜ್ಜನಕ್ಕೆರೆದು ಫಲವೇನು ?
ಮಾತಿನಂತೆ ಮನವಿಲ್ಲದ
ಜಾತಿ-ಡೊಂಬರ ನೋಡಿ ನಗುವನಯ್ಯ
ಕೂಡಲಸಂಗಮದೇವರು.

೩೫೬.
ಗುರೂಪದೇಶ ಮಂತ್ರವೈದ್ಯ!
ಜಂಗಮೋಪದೇಶ ಶಸ್ತ್ರವೈದ್ಯ ನೋಡಾ!
ಭವರೋಗವ ಕಳೆವ ಪರಿಯ ನೋಡಾ!
ಕೂಡಲಸಂಗನ ಶರಣರ ಅನುಭಾವ
ಮಡಿವಾಳನ ಕಾಯಕದಂತೆ!

೩೫೭.
ಶ್ವಪಚನಾದರೇನು ಲಿಂಗಭಕ್ತನೇ ಕುಲಜನು.
ನಂಬಿ ನಂಬದಿದ್ದರೆ, ಸಂದೇಹಿ ನೋಡಾ!
ಕಟ್ಟಿದರೇನು, ಮುಟ್ಟಿದರೇನು,
ಪೂಸಿದರೇನು ಮನಮುಟ್ಟದನ್ನಕ ?
ಭಾವಶುದ್ಧವಿಲ್ಲದವಂಗೆ ಭಕ್ತಿ ನೆಲೆಗೊಳ್ಳದು
ಕೂಡಲಸಂಗಮದೇವನೊಲಿದವಂಗಲ್ಲದೆ.

೩೫೮.
ಅರಗಿನ ಪುತ್ಧಳಿಗೆ ಉರಿಯ ನಾಲಗೆ ಹೊಯ್ದು
ಮಾತಾಡುವ ಸರಸ ಬೇಡ!
ಬೆಣ್ಣೆಯ ಬೆನಕಂಗೆ ಕೆಂಡದುಂಡಲಿಗೆಯ ಮಾಡಿ
ಚಲ್ಲವಾಡಿದರೆ ಹಲ್ಲು ಹೋಹುದು!
ಕೂಡಲಸಂಗನ ಶರಣರೊಡನೆ ಸರಸವಾಡಿದರೆ
ಅದು ವಿರಸ ಕಾಣಿರಣ್ಣ.

೩೫೯.
ಹಾವಿನ ಹೆಡೆಗಳ ಕೊಂಡು
ಕೆನ್ನೆಯ ತುರಿಸಿಕೊಂಬಂತೆ,
ಉರಿವ ಕೊಳ್ಳಿಯ ಕೊಂಡು
ಮಂಡೆಯ ಸಿಕ್ಕ ಬಿಡಿಸುವಂತೆ,
ಹುಲಿಯ ಮೀಸೆಯ ಹಿಡಿದುಕೊಂಡು
ಒಲೆದುಯ್ಯಲನಾಡುವಂತೆ,
ಕೂಡಲಸಂಗನ ಶರಣರೊಡನೆ ಮರೆದು ಸರಸವಾಡಿದರೆ
ಸುಣ್ಣಕಲ್ಲ ಮಡಿಲಲ್ಲಿ ಕಟ್ಟಿಕೊಂಡು ಮಡುವ ಬಿದ್ದಂತೆ!

೩೬೦.
ಉರಿವ ಕೊಳ್ಳಿಯ ಮಂಡೆಯಲಿಕ್ಕಿದಡೆ
ಉರಿವುದು ಮಾಣ್ಬುದೇ ?
ಕಲ್ಲ ಗುಗ್ಗುರಿಯ ಮೆಲಿದರೆ
ಹಲ್ಲು ಹೋಹುದು ಮಾಣ್ಬುದೇ ?
ಶರಣರೊಡನೆ ಸರಸವಾಡಿದರೆ
ನರಕ ತಪ್ಪದು ಕಾಣಾ ಕೂಡಲಸಂಗಮದೇವ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...