Skip to main content

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೩೭೧.
ಜಂಬೂದ್ವೀಪನವಖಂಡಪೃಥ್ವಿಯೊಳಗೆ
ಕೇಳಿರಯ್ಯ ಎರಡಾಳಿನ ಭಾಷೆಯ!
ಕೊಲುವೆನೆಂಬ ಭಾಷೆ ದೇವನದು,
ಗೆಲುವೆನೆಂಬ ಭಾಷೆ ಭಕ್ತನದು.
ಸತ್ಯವೆಂಬ ಕೂರಲಗನೆ ಕಳೆದುಕೊಂಡು
ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ.

೩೭೨.
ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ
ನುಗ್ಗುಮಾಡುವ, ನುಸಿಯ ಮಾಡುವ!
ಮಣ್ಣುಮಾಡುವ, ಮಸಿಯ ಮಾಡುವ!
ಕೂಡಲಸಂಗಮದೇವರ ನೆರೆನಂಬಿದನಾದರೆ
ಕಡೆಗೆ ತನ್ನಂತೆ ಮಾಡುವ.

೩೭೩.
ಅರೆವನಯ್ಯ ಸಣ್ಣವಹನ್ನಕ
ಒರೆವನಯ್ಯ ಬಣ್ಣಗಾಬನ್ನಕ
ಅರೆದರೆ ಸುಣ್ಣವಾಗಿ,
ಒರೆದರೆ ಬಣ್ಣವಾದರೆ
ಕೂಡಲಸಂಗಮದೇವನೊಲಿದು ಸಲಹುವನು.

೩೭೪.
ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ!
ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ!
ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು!
ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು!

೩೭೫.
ಅಂಜಿದರಾಗದು, ಅಳುಕಿದರಾಗದು!
ವಜ್ರಪಂಜರದೊಳಗಿದ್ದರಾಗದು!
ತಪ್ಪದೆಲವೋ ಲಲಾಟಲಿಖಿತ!
ಕಕ್ಕುಲತೆಬಟ್ಟರಾಗದು ನೋಡಾ!
ಧೃತಿಗೆಟ್ಟು ಮನ ಧಾತುಗೆಟ್ಟರೆ
ಅಪ್ಪುದು ತಪ್ಪದು ಕೂಡಲಸಂಗಮದೇವ.

೩೭೬.
ಆಯುಷ್ಯ ತೀರಿದಲ್ಲದೆ ಮರಣವಿಲ್ಲ.
ಭಾಷೆ ತೀರಿದಲ್ಲದೆ ದಾರಿದ್ರ್ಯವಿಲ್ಲ.
ಅಂಜಲದೇಕೋ ಲೋಕವಿಗರ್ಹಣೆಗೆ ?
ಅಂಜಲದೇಕೋ ಕೂಡಲಸಂಗಮದೇವ ನಿಮ್ಮಾಳಾಗಿ ?

೩೭೭.
ಮನಕ್ಕೆ ಮನ ಒಂದಾಗಿ, ಧನಕ್ಕೆ ಧನ ಒಂದಾಗಿ;
ನಚ್ಚಿದ ಮಚ್ಚು ಅಚ್ಚೊತ್ತಿದಂತಿರಬೇಕು.
ಪ್ರಾಣಕ್ಕೆ ಪ್ರಾಣ ಒಂದಾಗಿ, ಶುಭಸೂಚನೆ ಒಂದಾಗಿರದ
ನಚ್ಚು ಮಚ್ಚು ಪಾರವೈದುವುದೆ ?
ಶಿರ ಹರಿದರೇನು ? ಕರುಳು ಕುಪ್ಪಳಿಸಿದರೇನು ?
ಇಂತಪ್ಪ ಸಮಸ್ತ ವಸ್ತುವೆಲ್ಲ ಹೋದರೇನು ?
ಚಿತ್ತ-ಮನ-ಬುದ್ಧಿಯೊಂದಾದ ಮಚ್ಚು
ಬಿಚ್ಚಿ ಬೇರಾಗದಿದ್ದರೆ
ಮೆಚ್ಚುವ ನಮ್ಮ ಕೂಡಲಸಂಗಮದೇವ.

೩೭೮.
ಎನಿಸೆನಿಸೆಂದಡೆಯೂ ನಾ ಧೃತಿಗೆಡೆನಯ್ಯ ?
ಎಲುದೋರಿದಡೆಯೂ, ನರ ಹರಿದಡೆಯೂ,
ಕರಳು ಕುಪ್ಪಳಿಸಿದಡೆಯೂ ನಾ ಧೃತಿಗೆಡೆನಯ್ಯ ?
ಸಿರ ಹರಿದು ಅಟ್ಟೆ ನೆಲಕ್ಕೆ ಬಿದ್ದಡೆಯೂ
ನಾಲಗೆ ಕೂಡಲಸಂಗ ಶರಣೆನುತಿಪ್ಪುದಯ್ಯ ?

೩೭೯.
ಒಣಗಿಸಿಯೆನ್ನ ಘಣಘಣಲನೆ ಮಾಡಿದಡೆಯೂ
ಹರಣವುಳ್ಳನ್ನಕ ನಿಮ್ಮ ಚರಣವ ನೆನೆವುದ ಮಾಣೆ, ಮಾಣೆ!

ಶರಣೆಂಬುದ ಮಾಣೆ, ಮಾಣೆ!
ಕೂಡಲಸಂಗಮದೇವಯ್ಯ
ಎನ್ನ ಹೆಣನ ಮೇಲೆ ಕಂಚಿಟ್ಟುಂಡೊಡೆಯು ಮಾಣೆ, ಮಾಣೆ!

೩೮೦.
ಜಾಗ್ರತ್-ಸ್ವಪ್ನ-ಸುಷುಪ್ತಿಯಲ್ಲಿ
ಮತ್ತೊಂದ ನೆನೆದಡೆ ತಲೆದಂಡ, ತಲೆದಂಡ!
ಹುಸಿಯಾದಡ ದೇವಾ, ತಲೆದಂಡ! ತಲೆದಂಡ!
ಕೂಡಲಸಂಗಮದೇವ ನೀವಲ್ಲದೆ ಅನ್ಯವ ನೆನೆದಡೆ
ತಲೆದಂಡ, ತಲೆದಂಡ!

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...