Skip to main content

ಬಸವಣ್ಣನ ವಚನಗಳು - 411 ರಿಂದ 420 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೪೧೧.
ಶಿವಲೋಕಕ್ಕೆ ಸರಿ ಬೇರೆ ಲೋಕವಿಲ್ಲ!
ಶಿವಮಂತ್ರಕ್ಕೆ ಸರಿ ಬೇರೆ ಮಂತ್ರವಿಲ್ಲ!
ಜಗಕ್ಕೆ ಇಕ್ಕಿದೆ ಮುಂಡಿಗೆಯ!
ಎತ್ತಿಕೊಳ್ಳಿ, ಕೂಡಲಸಂಗಯ್ಯನೊಬ್ಬನೇ ದೈವವೆಂದು!

೪೧೨.
ವೇದ ನಡನಡುಗಿತ್ತು.
ಶಾಸ್ತ್ರವಗಲಿ ಕೆಲಕ್ಕೆ ಸಾರಿದ್ದುದಯ್ಯ,
ತರ್ಕ ತರ್ಕಿಸಲರಿಯದೆ ಮೂಗುವಟ್ಟಿದ್ದಿತಯ್ಯ,
ಆಗಮ ಹೊರತೊಲಗಿ ಆಗಲಿದ್ದಿತಯ್ಯ,
ನಮ್ಮ ಕೂಡಲಸಂಗಯ್ಯನು
ಚೆನ್ನಯ್ಯನ ಮನೆಯಲುಂಡ ಕಾರಣ!

೪೧೩.
ಆರು ಮುನಿದು ನಮ್ಮನೇನ ಮಾಡುವರು ?
ಊರು ಮುನಿದು ನಮ್ಮನೆಂತು ಮಾಡುವರು ?
ನಮ್ಮ ಕುನ್ನಿಗೆ ಕೂಸ ಕೊಡಬೇಡ!
ನಮ್ಮ ಸೊಣಗಂಗೆ ತಣಿಗೆಯಲ್ಲಿಕ್ಕಬೇಡ!
ಆನೆಯ ಮೇಲೆ ಹೋಹನ ಶ್ವಾನ ಕಚ್ಚಬಲ್ಲುದೆ ?
ನಮಗೆ ನಮ್ಮ ಕೂಡಲಸಂಗನುಳ್ಳನ್ನಕ ?

೪೧೪.
ನ್ಯಾಯನಿಷ್ಠುರ!
ದಾಕ್ಷಿಣ್ಯಪರ ನಾನಲ್ಲ.
ಲೋಕವಿರೋಧಿ!
ಶರಣನಾರಿಗಂಜುವನಲ್ಲ,
ಕೂಡಲಸಂಗಮದೇವರ ರಾಜತೇಜದಲ್ಲಿಪ್ಪೆನಾಗಿ!

೪೧೫.
ಊರ ಮುಂದೆ
ಹಾಲ ಹಳ್ಳ ಹರಿಯುತ್ತಿರಲು ?
ಓರೆಯಾವಿನ ಬೆನ್ನ ಹರಿಯಲದೇಕಯ್ಯ ?
ಲಜ್ಜೆಗೆಡಲೇಕೆ ? ನಾಣುಗೆಡಲೇಕೆ ?
ಕೂಡಲಸಂಗಮದೇವಯ್ಯನುಳ್ಳನ್ನಕ
ಬಿಜ್ಜಳನ ಭಂಡಾರವೆನಗೇಕಯ್ಯ ?

೪೧೬.
ಕಂಡುದಕ್ಕೆಳೆಸೆನೆನ್ನ ಮನದಲ್ಲಿ;
ನೋಡಿ ಸೋಲೆನೆನ್ನ ಕಂಗಳಲ್ಲಿ;
ಆಡಿ ಹುಸಿಯನೆನ್ನ ಜಿಹ್ವೆಯಲ್ಲಿ;
ಕೂಡಲಸಂಗಮದೇವ,
ನಿಮ್ಮ ಶರಣನ ಪರಿ ಇಂತುಟಯ್ಯ.

೪೧೭.
ಆಪ್ಯಾಯನಕ್ಕೆ ನೀಡುವೆ:
ಲಾಂಛನಕ್ಕೆ ಶರಣೆಂಬೆ.
ಲಾಂಛನಕ್ಕೆ ತಕ್ಕ ಆಚಾರವಿಲ್ಲದಿದ್ದರೆ
ನೀ ಸಾಕ್ಷಿಯಾಗಿ ಛೀಯೆಂಬೆನು.

೪೧೮.
ದಾಸನಂತೆ ತವನಿಧಿಯ ಬೇಡುವನಲ್ಲ,
ಚೋಳನಂತೆ ಹೊನ್ನ ಮಳೆಯ ಕರಸೆಂಬುವನಲ್ಲ.
ಅಂಜದಿರು, ಅಂಜದಿರು!
ಅವರಂದದವ ನಾನಲ್ಲ!
ಎನ್ನ ತಂದೆ ಕೂಡಲಸಂಗಮದೇವ,
ಸದ್ಭಕ್ತಿಯನೆ ಕರಣಿಸೆನಗೆ.

೪೧೯.
ಲಿಂಗದಲ್ಲಿ ಸಮ್ಯಕ್ಕರು,
ಲಿಂಗದಲ್ಲಿ ಸದರ್ಥರು,
ಲಿಂಗದ ಸೊಮ್ಮು-ಸಂಬಂಧವರಿತ
ಸ್ವಾಮಿಭೃತ್ಯರೆಲ್ಲರು ನಿಮ್ಮ ಬೇಡೆನಂಜದಿರಿ.
ಎನಗೆ ಮರ್ತ್ಯಲೋಕದ ಮಹಾಗಣಂಗಳುಂಟು.
ಇದು ಕಾರಣ, ಕೂಡಲಸಂಗಮದೇವರ ಲೋಕವ
ಹಂಚಿಕೊಳ್ಳಿ ನಿಮನಿಮಗೆ.

೪೨೦.
ಕಲಿಯ ಕಯ್ಯ ಕೈದುವನಂತಿರಬೇಕಯ್ಯ
ಎಲುದೋರ ಸರಸವಾಡಿದರೆ ಸೈರಿಸಬೇಕಯ್ಯ,
ರಣದಲ್ಲಿ ತಲೆ ಹರಿದು ನೆಲಕ್ಕೆ ಬಿದ್ದು ಬೊಬ್ಬಿಡಲು
ಅದಕ್ಕೆ ಒಲಿವ ಕೂಡಲಸಂಗಮದೇವ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...