Skip to main content

ಬಸವಣ್ಣನ ವಚನಗಳು - 431 ರಿಂದ 440 ರವರೆಗೆ


Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೪೩೧.
ಶಿವಾಚಾರವೆಂಬುದೊಂದು ಬಾಳ ಬಾಯಿಧಾರೆ
ಲಿಂಗ ಮೆಚ್ಚಬೇಕು; ಜಂಗಮ ಮೆಚ್ಚಬೇಕು
ಪ್ರಸಾದ ಮೆಚ್ಚಿ ತನ್ನಲ್ಲಿ ಸ್ವಾಯತವಾಗಿರಬೇಕು.
ಬಿಚ್ಚಿ ಬೇರಾದರೆ ಮೆಚ್ಚ ನಮ್ಮ ಕೂಡಲಸಂಗಮದೇವ.

೪೩೨.
ಆವಾವ ಭಾವದಲ್ಲಿ ಶಿವನ ನಂಬಿದ ಶರಣರು
ಎಂತಿದ್ದರೇನಯ್ಯ ?
ಆವಾವ ಭಾವದಲ್ಲಿ ಶಿವನ ನಂಬಿದ ಮಹಿಮರು
ಎಂತಿದ್ದರೇನಯ್ಯ ?
ಸುಚರಿತ್ರರೆಂತಿದ್ದರೇನಯ್ಯ ?
ಅವಲೋಹವ ಕಳೆವ
ಪರುಷವೆಂತಿದ್ದರೇನಯ್ಯ ?
ಕೂಡಲಸಂಗನ ಶರಣರು ರಸದ ವಾರಿಧಿಗಳು
ಎಂತಿದ್ದರೇನಯ್ಯ ?

೪೩೩.
ನಡೆ ಚೆನ್ನ, ನುಡಿ ಚೆನ್ನ, ಎಲ್ಲಿ ನೋಡಿದರಲ್ಲಿ ಚೆನ್ನ!
ಪ್ರಮಥರೊಳಗೆ ಚೆನ್ನ, ಪುರಾತರೊಳಗೆ ಚೆನ್ನ!
ಪ್ರಸಾದಿಗಳೊಳಗೆ ಚೆನ್ನ!
ಸವಿದು ನೋಡಿ ಅಂಬಲಿ ರುಚಿಯಾಯಿತ್ತೆಂದು
ಕೂಡಲಸಂಗಮದೇವರಿಗೆ ಬೇಕಾಯಿತ್ತೆಂದು
ಕೈದೆಗೆದ ನಮ್ಮ ಚೆನ್ನ!

೪೩೪.
ಲಿಂಗವಿಕಾರಿಗೆ ಅಂಗವಿಕಾರವೆಂಬುದಿಲ್ಲ.
ಜಂಗಮವಿಕಾರಿಗೆ ಧನವಿಕಾರವೆಂಬುದಿಲ್ಲ.
ಪ್ರಸಾದವಿಕಾರಿಗೆ ಮನವಿಕಾರವೆಂಬುದಿಲ್ಲ.
ಇಂತೀ ತ್ರಿವಿಧಗುಣವನರಿದಾತನು
ಅಚ್ಚಲಿಂಗೈಕ್ಯನು ಕೂಡಲಸಂಗಮದೇವ.

೪೩೫.
ಪ್ರಾಣಲಿಂಗಪ್ರತಿಗ್ರಾಹಕನಾದ ಬಳಿಕ
ಲಿಂಗವಿರಹಿತವಾಗಿ ನಡೆವ ಪರಿಯೆಂತೊ ?
ಲಿಂಗವಿರಹಿತವಾಗಿ ನುಡಿವ ಪರಿಯೆಂತೊ ?
ಪಂಚೇಂದ್ರಿಯಸುಖವನು
ಲಿಂಗವಿರಹಿತವಾಗಿ ಭುಂಜಿಸಲಾಗದು!
"ಲಿಂಗವಿರಹಿತವಾಗಿ ಉಗುಳ ನುಂಗಲಾಗದು!"
ಇಂತೆಂದುದು ಕೂಡಲಸಂಗನ ವಚನ.

೪೩೬.
ಹತ್ತು ಸಾವಿರ ಗೀತವ ಹಾಡಿ ಅರ್ಥವಿಟ್ಟಲ್ಲಿ ಫಲವೇನು
ಮುಟ್ಟುವ ತೆರನನರಿಯದನ್ನಕ ?
ಕಟ್ಟಿದರೇನು ಬಿಟ್ಟರೇನು
ಮನವು ಲಿಂಗದಲ್ಲಿ ಮುಟ್ಟದನ್ನಕ ?
ಮಾತಿನಲೆ ಒಲಿಸಿ ಮಹತ್ತಪ್ಪ ಲಿಂಗವ ಕಂಡೆನೆಂಬ
ಪಾತಕರ ಮೆಚ್ಚ ನಮ್ಮ ಕೂಡಲಸಂಗಮದೇವ

೪೩೭.
ಶ್ವಾನಜ್ಞಾನ, ಗಜಜ್ಞಾನ, ಕುಕ್ಕುಟಜ್ಞಾನವೆಂಬ
ಜ್ಞಾನತ್ರಯಂಗಳೇಕಾದವು ?!
ಕೂಡಲಸಂಗಮದೇವ,
ನಿಮ್ಮನರಿಯದ ಜ್ಞಾನವೆಲ್ಲ ಅಜ್ಞಾನ!

೪೩೮.
ಕಬ್ಬುನ ಪರುಷವೇದಿಯಾದರೇನು ?!
ಕಬ್ಬುನ ಹೊನ್ನಾಗದೊಡೆ ಪರುಷವದೇಕೋ ?
ಮನೆಯೊಳಗೆ ಕತ್ತಲೆ ಹರಿಯದೊಡೆ
ಆ ಜ್ಯೋತಿಯದೇಕೋ ?
ಕೂಡಲಸಂಗಮದೇವರ ಮನಮುಟ್ಟಿ ಪೂಜಿಸಿ
ಕರ್ಮ ಹರಿಯದೊಡೆ ಆ ಪೂಜೆಯದೇಕೋ ?

೪೩೯.
ಅಹಂಕಾರ ಮನವನಿಂಬುಗೊಂಡಲ್ಲಿ
ಲಿಂಗ ತಾನೆಲ್ಲಿಪ್ಪುದೋ ?
ಅಹಂಕಾರಕ್ಕೆ ಎಡೆಗುಡದೆ
ಲಿಂಗತನುವಾಗಿರಬೇಕು!
ಅಹಂಕಾರರಹಿತನಾದಲ್ಲಿ
ಸನ್ನಿಹಿತ ಕಾಣಾ ಕೂಡಲಸಂಗಮದೇವ.

೪೪೦.
ನುಡಿದರೆ ಮುತ್ತಿನ ಹಾರದಂತಿರಬೇಕು!
ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು!
ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು!
ನುಡಿದರೆ ಲಿಂಗ ಮೆಚ್ಚಿ ಅಹುದೆನಬೇಕು ?
ನುಡಿಯೊಳಗಾಗಿ ನಡೆಯದಿದ್ದರೆ
ಕೂಡಲಸಂಗಮದೇವನೆಂತೊಲಿವನಯ್ಯ ?

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...