Skip to main content

ಬಸವಣ್ಣನ ವಚನಗಳು - 451 ರಿಂದ 460 ರವರೆಗೆ



Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೪೫೧.
ಭೂತ ಒಲಿದು ಆತ್ಮನ ಸೋಂಕಿದ ಬಳಿಕ
ಭೂತದ ಗುಣವಲ್ಲದೆ, ಆತ್ಮನ ಗುಣವುಂಟೆ ?
ಗುರುಕಾರುಣ್ಯವಾಗಿ,
ಹಸ್ತಮಸ್ತಕಸಂಯೋಗವಾದ ಬಳಿಕ
ಗುರುಲಿಂಗಜಂಗಮವೇ ಗತಿಯಾಗಿದ್ದೆ
ಕೂಡಲಸಂಗಮದೇವ.

೪೫೨.
ಮಾಡುವಾತ ನಾನಲ್ಲಯ್ಯ,
ನೀಡುವಾತ ನಾನಲ್ಲಯ್ಯ,
ಬೇಡುವಾತ ನಾನಲ್ಲಯ್ಯ,
ನಿಮ್ಮ ಕಾರುಣ್ಯವಲ್ಲದೆ, ಎಲೆ ದೇವಾ!
ಮನೆಯ ತೊತ್ತಲಸಿದರೆ ಒಡತಿ ಮಾಡಿಕೊಂಬಂತೆ
ನಿನಗೆ ನೀ ಮಾಡಿಕೋ ಕೂಡಲಸಂಗಮದೇವಾ!

೪೫೩.
ಪರಿಯಾಣವೇ ಭಾಜನವೆಂಬರು
ಪರಿಯಾಣ ಭಾಜನವಲ್ಲ ಲಿಂಗಕ್ಕೆ!
ತನ್ನ ಮನವೇ ಭಾಜನ!
ಪ್ರಾಣವನು ಬೀಸರವೋಗದೆ
ಮೀಸಲಾಗರ್ಪಿಸಬಲ್ಲಡೆ,
ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಮದೇವ.

೪೫೪.
ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯ.
ಜ್ಯೋತಿಯ ಬಲದಿಂದ ತಮಂಧದ ಕೇಡು ನೋಡಯ್ಯ.
ಸತ್ಯದ ಬಲದಿಂದ ಅಸತ್ಯದ ಕೇಡು ನೋಡಯ್ಯ.
ಪರುಷದ ಬಲದಿಂದ ಅವಲೋಹದ ಕೇಡು ನೋಡಯ್ಯ.
ಕೂಡಲಸಂಗನ ಶರಣರನುಭಾವದಿಂದ
ಎನ್ನ ಭವದ ಕೇಡು ನೋಡಯ್ಯ.

೪೫೫.
ಆಲಿಕಲ್ಲ ಹರಳಿನಂತೆ,
ಅರಗಿನ ಪುತ್ಥಳಿಯಂತೆ
ತನು ಕರಗಿ ನೆರೆವ ಸುಖವ ನಾನೇನೆಂಬ!
ಕಡೆಗೋಡಿವರಿದವೆನಗಯ್ಯ ನಯನದ ಸುಖಜಲಂಗಳು!
ನಮ್ಮ ಕೂಡಲಸಂಗಮದೇವರ ಮುಟ್ಟಿ
ನೆರೆವ ಸುಖವನಾರಿಗೇನೆಂಬೆ!

೪೫೬.
ನಾಲಗೆ ತಾಗಿದ ರುಚಿಗೆ ಮನವೇ ಸಾಕ್ಷಿ!
ಸಾಲದೇ ಅಯ್ಯ!
ಮಾಲೆಗಾರನ ಕೇಳಿ ನನೆಯರಳುವುದೇ ?
ಆಗಮವನಿದಿರಿಂಗೆ ತೋರುವುದು ಆಚಾರವೇ ಅಯ್ಯ ?
ಕೂಡಲಸಂಗನ ಕೂಡಿದ
ಕೂಟದ ಕರುಳ ಕಲೆಯನು
ಇದಿರಿಂಗೆ ತೋರುವುದು ಆಚಾರವೇ ಅಯ್ಯ ?

೪೫೭.
ಎಲ್ಲ ಗಂಡರ ಪರಿಯಂತಲ್ಲ ನೋಡವ್ವ ನನ್ನ ನಲ್ಲ!
ಸುಳಿಯಲಿಲ್ಲ, ಸುಳಿದು ಸಿಂಗರವ ಮಾಡಲಿಲ್ಲ;
ಕೂಡಲ ಸಂಗಮ ದೇವನು ತನ್ನೊಳಗೆ ಬೈಚಿಟ್ಟನಾಗಿ!

೪೫೮.
ಆಹ್ವಾನಿಸಿ ಕರೆವಲ್ಲಿ ಎಲ್ಲಿದ್ದನೋ
ಈರೇಳು ಭುವನಂಗಳ ಒಳಗೊಂಡಿಪ್ಪ ದಿವ್ಯವಸ್ತು ?
ಮತ್ತೆ, ವಿಸರ್ಜಿಸಿ ಬಿಡುವಾಗ ಎಲ್ಲಿದ್ದನೋ
ಮುಳ್ಳೂರ ತೆರಹಿಲ್ಲದಿಪ್ಪ ಅಖಂಡವಸ್ತು ?
ಬರಿಯ ಮಾತಿನ ಬಳಕೆಯ ತೂತಿನ ಜ್ಞಾನವ ಬಿಟ್ಟು
ನೆಟ್ಟನೆ ತನ್ನ ಕರಸ್ಥಳದೊಳಗಿರುತಿಪ್ಪ
ಇಷ್ಟಲಿಂಗವ ದಿಟ್ಟಿಸಿ ನೋಡಲು
ಅಲ್ಲಿ ತನ್ನ ಮನಕ್ಕೆ ಮನ-ಸಂಧಾನವಾಗಿ ದಿವ್ಯನಿಶ್ಚಯ ಒದಗೆ
ಆ ದಿವ್ಯ ನಿಶ್ಚಯದಿಂದ ಕುಳವಡಗಿ ಅದ್ವೈತವಪ್ಪುದು!
ಇದು ಕಾರಣ, ನಮ್ಮ ಕೂಡಲಸಂಗನ ಶರಣರು
ಆಹ್ವಾನ-ವಿಸರ್ಜನವೆಂಬುಭಯ ಜಡತೆಯ ಬಿಟ್ಟು
ತಮ್ಮ ತಮ್ಮ ಕರಸ್ಥಳದಲ್ಲಿ ನಿಶ್ಚೈಸಿ ಅವರೇ
ಸ್ವಯಲಿಂಗವಾದರು ಕಾಣಿರೋ!

೪೫೯.
ಎನ್ನ ಗಂಡ ಬರಬೇಕೆಂದು
ಎನ್ನ ಅಂತರಂಗವೆಂಬ ಮನೆಯ ತೆರಹುಮಾಡಿ
ಅಷ್ಟದಳಕಮಲವೆಂಬ ಓವರಿಯೊಳಗೆ
ನಿಜನಿವಾಸವೆಂಬ ಹಾಸುಗೆಯ ಹಾಸಿ
ಧ್ಯಾನಮೌನವೆಂಬ ಮೇಲುಕಟ್ಟ ಕಟ್ಟಿ
ಜ್ಞಾನವೆಂಬ ದೀಪವ ಬೆಳಗಿ
ನಿಷ್ಕ್ರೀಗಳೆಂಬುಪಕರಣಂಗಳ ಹರಹಿಕೊಂಡು
ಪಶ್ಚಿಮದ್ವಾರವೆಂಬ ಬಾಗಿಲ ತೆರೆದು
ಕಂಗಳೇ ಪ್ರಾಣವಾಗಿ ಹಾರುತಿರ್ದೆನಯ್ಯ!
"ನಾನು ಬಾರೆನೆಂದು ಉಮ್ಮಳಿಸಿಹ"ನೆಂದು
ತಾನೇ ಬಂದು ಎನ್ನ ಹೃದಯಸಿಂಹಾಸನದ ಮೇಲೆ
ಮೂರ್ತಿಗೊಂಡರೆ
ಎನ್ನ ಮನದ ಬಯಕೆ ಸಯವಾಯಿತ್ತು.
ಹಿಂದೆ ಹನ್ನೆರಡು ವರ್ಷದಿಂದಿದ್ದ ಚಿಂತೆ ನಿಶ್ಚಿಂತೆಯಾಯಿತ್ತು!
ಕೂಡಲಸಂಗಮದೇವ ಕೃಪಾಮೂರ್ತಿಯಾದ ಕಾರಣ,
ಆನು ಬದುಕಿದೆನು.

೪೬೦.
ಕಾಯವೆಂಬ ಘಟಕ್ಕೆ
ಚೈತನ್ಯವೇ ಸಯಿದಾನ,
ಸಮತೆ ಎಂಬ ಜಲ,
ಕರಣಾದಿಗಳೇ ಸ್ರವಣ,
ಜ್ಞಾನವೆಂಬ ಅಗ್ನಿಯನಿಕ್ಕಿ
ಮತಿಯೆಂಬ ಸಟ್ಟುಗದಲ್ಲಿ ಘಟ್ಟಿಸಿ,
ಪಾಕಕ್ಕೆ ತಂದು, ಭಾವದಲ್ಲಿ ಕುಳ್ಳಿರಿಸಿ
ಪರಿಣಾಮದೋಗರವ ನೀಡಿದರೆ
ಕೂಡಲಸಂಗಮದೇವಂಗೆ ಆರೋಗಣೆಯಾಯಿತ್ತು.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...