Skip to main content

ಬಸವಣ್ಣನ ವಚನಗಳು - 471 ರಿಂದ 480 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೪೭೧.
ಲಗ್ನವೆಲ್ಲಿಯದೋ
ವಿಘ್ನವೆಲ್ಲಿಯದೋ ಸಂಗಯ್ಯ ?
ದೋಷವೆಲ್ಲಿಯದೋ
ದುರಿತವೆಲ್ಲಿಯದೋ ಸಂಗಯ್ಯ ?
ನಿಮ್ಮ ಮಾಣದೆ ನೆನೆವಂಗೆ
ಭವಕರ್ಮವೆಲ್ಲಿಯದೋ ಕೂಡಲಸಂಗಯ್ಯ!

೪೭೨.
ಶರಣ ನಿದ್ರೆಗೈದರೆ ಜಪ ಕಾಣಿರೋ!
ಶರಣನೆದ್ದು ಕುಳಿತರೆ ಶಿವರಾತ್ರಿ ಕಾಣಿರೋ!
ಶರಣ ನಡೆದುದೇ ಪಾವನ ಕಾಣಿರೋ!
ಶರಣ ನುಡಿದುದೇ ಶಿವತತ್ವಕಾಣಿರೋ
ಕೂಡಲಸಂಗನ ಶರಣನ ಕಾಯವೇ
ಕೈಲಾಸ ಕಾಣಿರೋ!

೪೭೩.
ಸಮುದ್ರ ಘನವೆಂಬೆನೆ ?
ಧರೆಯ ಮೇಲಡಗಿತ್ತು!
ಧರೆ ಘನವೆಂಬೆನೆ ?
ನಾಗೇಂದ್ರನ ಫಣಾಮಣಿಯ ಮೇಲಡಗಿತ್ತು!
ನಾಗೇಂದ್ರ ಘನವೆಂಬೆನೆ ?
ಪಾರ್ವತಿಯ ಕಿರುಗುಣಿಕೆಯ ಮುದ್ರಿಕೆಯಾಯಿತ್ತು!
ಅಂಥ ಪಾರ್ವತಿ ಘನವೆಂಬೆನೆ ?
ಪರಮೇಶ್ವರನ ಅರ್ಧಾಂಗಿಯಾದಳು!
ಅಂಥ ಪರಮೇಶ್ವರ ಘನವೆಂಬೆನೆ ?
ನಮ್ಮ ಕೂಡಲಸಂಗನ ಶರಣರ
ಮನದ ಕೊನೆಯ ಮೊನೆಯ ಮೇಲಡಗಿದನು!

೪೭೪.
ನೆಲನೊಂದೇ ಹೊಲೆಗೇರಿ, ಶಿವಾಲಯಕ್ಕೆ!
ಜಲವೊಂದೇ ಶೌಚಾಚಮನಕ್ಕೆ!
ಕುಲವೊಂದೇ ತನ್ನ ತಾನರಿದವಂಗೆ!
ಫಲವೊಂದೇ ಷಡುದರ್ಶನ ಮುಕ್ತಿಗೆ!
ನಿಲವೊಂದೇ, ಕೂಡಲಸಂಗಮದೇವ,
ನಿಮ್ಮನರಿದವಂಗೆ.

೪೭೫.
ಅಯ್ಯಾ, ಸಜ್ಜನ ಸದ್ಭಕ್ತರ ಸಂಗದಿಂದ
ಮಹಾನುಭಾವರ ಕಾಣಬಹುದು!
ಮಹಾನುಭಾವರ ಸಂಗದಿಂದ
ಶ್ರಿಗುರುವನರಿಯಬಹುದು!
ಲಿಂಗವನರಿಯಬಹುದು ಜಂಗಮವನರಿಯಬಹುದು!
ಪ್ರಸಾದವನರಿಯಬಹುದು! ತನ್ನ ತಾನರಿಯಬಹುದು!!
ಇದು ಕಾರಣ ಸದ್ಭಕ್ತರ ಸಂಗವ ಕರುಣಿಸು
ಕೂಡಲಸಂಗಮದೇವಾ ನಿಮ್ಮ ಧರ್ಮ!

೪೭೬.
ಕುಂಡಲಿಗನೊಂದು ಕೀಡೆಯ ತಂದು
ತನ್ನಂತೆ ಮಾಡಿತಲ್ಲ!
ಎಲೆ ಮಾನವಾ, ಕೇಳಿ ನಂಬಯ್ಯ!
ನೋಡಿ ನಂಬಯ್ಯ, ಎಲೆ ಮಾನವ!
"ತ್ವಚ್ಚಿಂತಯಾ ಮಹಾದೇವ!
ತ್ವಮೇವಾಸ್ಮಿ ನ ಸಂಶಯಃ!
ಭ್ರಮದ್ ಭ್ರಮರಚಿಂತಾಯಾಂ
ಕೀಟೋಪಿ ಭ್ರಮರಾಯತೇ"!!
ಕೂಡಲಸಂಗನ ಶರಣರ ಅನುಭಾವ
ಇದರಿಂದ ಕಿರುಕುಳವೆ ಎಲೆ ಮಾನವಾ ?!

೪೭೭.
ಮರಮರನ ಮಥನದಿಂದಗ್ನಿ ಹುಟ್ಟಿ,
ಆ ಮರನೆಲ್ಲವ ಸುಡದಿಪ್ಪುದೆ ?
ಮಹಾನುಭಾವರ ಸಂಗದಿಂದ ಜ್ಞಾನಾಗ್ನಿ ಹುಟ್ಟಿ
ಎನ್ನ ತನುಗುಣವೆಲ್ಲವ ಸುಡದಿಪ್ಪುದೆ ?
ಇದು ಕಾರಣ,
ಮಹಾನುಭಾವರ ತೋರಿಸು
ಕೂಡಲಸಂಗಮದೇವ.

೪೭೮.
ಅರಿದುದ ಅರಿಯಲೊಲ್ಲದು! ಅದೆಂತಯ್ಯ ?
ಮರೆದುದ ಮರೆಯಲೊಲ್ಲದು! ಅದೆಂತಯ್ಯ
ಅರಿದು ಮರೆದ ಮನವ
ಕೂಡಲಸಂಗಯ್ಯ ತಾನೇ ಬಲ್ಲ.

೪೭೯.
ಮೀಸಲು ಬೀಸರವೋದ ಪರಿಯ ನೋಡಾ!
ಕಾಲು ತಾಗಿದ ಅಗ್ಛವಣಿ,
ಕೈ ಮುಟ್ಟಿದರ್ಪಿತ
ಮನ ಮುಟ್ಟಿದಾರೋಗಣೆಯನೆಂತು ಘನವೆಂಬೆನಯ್ಯ !?
ಬಂದ ಪರಿಯಲಿ ಪರಿಣಾಮಿಸಿ
ನಿಂದ ಪರಿಯಲ್ಲಿ ನಿಜಮಾಡಿ
ಆನೆಂದ ಪರಿಯಲ್ಲಿ ಕೈಕೋ
ಕೂಡಲಸಂಗಮದೇವ!

೪೮೦.
ಹಾಲೆಂಜಲು ವತ್ಸನ!
ಉದಕವೆಂಜಲು ಮತ್ಸ್ಯದ!
ಪುಷ್ಪವೆಂಜಲು ತುಂಬಿಯ!
ಎಂತು ಪೂಜಿಸುವೆನಯ್ಯ!
ಶಿವಶಿವಾ! ಎಂತು ಪೂಜಿಸುವೆ ?
ಈ ಎಂಜಲವನತಿಗಳೆವರೆ ಎನ್ನಳವಲ್ಲ.
ಬಂದುದ ಕೈಕೋ ಕೂಡಲಸಂಗಮದೇವ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...