Skip to main content

ಬಸವಣ್ಣನ ವಚನಗಳು - 481 ರಿಂದ 490 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೪೮೧.
ದಿಟ ಮಾಡಿ ಪೂಜಿಸಿದರೆ ಸಟೆ ಮಾಡಿ ಕಳೆವೆ.
ಸಟೆ ಮಾಡಿ ಪೂಜಿಸಿದರೆ ದಿಟ ಮಾಡಿ ಕಳೆವೆ.
ಏನೆಂಬೆನೆಂತೆಂಬೆ!
ಸುಖಕ್ಕೆ ತುಂಬಿದ ದೀವಿಗೆ ಮನೆಯೆಲ್ಲವ ಸುಟ್ಟಂತೆ
ಆನು ಮಾಡಿದ ಭಕ್ತಿ
ಎನಗಿಂತಾಯಿತ್ತು ಕೂಡಲಸಂಗಮದೇವ.

೪೮೨.
ಎಂಬತ್ತೆಂಟು ಪವಾಡವ ಮೆರೆದು
ಹಗರಣದ ಚೋಹದಂತಾಯಿತ್ತೆನ್ನ ಭಕ್ತಿ;
ತನುವಿನೊಳಗೆ ಮನ ಸಿಲುಕದೆ,
ಮನದೊಳಗೆ ತನು ಸಿಲುಕದೆ
ತನು ಅಲ್ಲಮನಲ್ಲಿ ಸಿಲುಕಿತ್ತು!
ಮನ ಚೆನ್ನಬಸವಣ್ಣನಲ್ಲಿ ಸಿಲುಕಿತ್ತು
ನಾನೇತರಲ್ಲಿ ನೆನೆವೆನಯ್ಯ
ಕೂಡಲಸಂಗಮದೇವ ? !

೪೮೩.
ಬಸವ ಬಾರಯ್ಯ,
ಮರ್ತ್ಯಲೋಕದೊಳಗೆ ಭಕ್ತರುಂಟೆ ಹೇಳಯ್ಯ ?
ಮತ್ತಾರು ಇಲ್ಲಯ್ಯ, ಮತ್ತಾರು ಇಲ್ಲಯ್ಯ !
ನಾನೊಬ್ಬನೇ ಭಕ್ತನು,
ಮರ್ತ್ಯಲೋಕದೊಳಗಣ ಭಕ್ತರೆಲ್ಲರೂ
ಜಂಗಮಲಿಂಗ ನೀನೇ ಅಯ್ಯ ಕೂಡಲಸಂಗಮದೇವ!!

೪೮೪.
ಭಕ್ತ, ಮಾಹೇಶ್ವರ, ಪ್ರಸಾದಿ,
ಪ್ರಾಣಲಿಂಗ, ಶರಣನೈಕ್ಯನು
ಮೆಲ್ಲಮೆಲ್ಲನೆ ಆದೆನೆಂಬನ್ನಬರ,
ನಾನು ವಜ್ರದೇಹಿಯೆ ?
ನಾನೇನು ಅಮೃತವ ಸೇವಿಸಿದೆನೆ ?
ನಾನು ಮರುಜೇವಣಿಯ ಕೊಂಡೆನೆ ?
ನುಡಿದ ನುಡಿಯೊಳಗೆ ಷಡುಸ್ಥಲ ಬಂದು
ನನ್ನ ಮನವನಿಂಬುಗೊಳದಿದ್ದರೆ
ಸುಡುವೆನೀ ತನುವ ಕೂಡಲಸಂಗಮದೇವ.

೪೮೫.
ತಾಪತ್ರಯವೆಂದರೆ ರೂಪ ಕಾಣುತ್ತ ಕನಲಿದ!
ಕೋಪದಲ್ಲಿ ಶಿವಕಳೆಯದ ಕರಡಿಗೆಯನೆ ಮುರಿದ!
ಧೂಪಗುಂಡಿಗೆಯನೊಡೆದ!
ದೀಪದಾರತಿಯ ನಂದಿಸಿದ!
ಬಹು ಪರಿಣಾಮದೋಗರವ ತುಡುಕಿದ!
ಪಾಪಕರ್ಮ, ಕೂಡಲಸಂಗಮದೇವಾ,
ನಿಮ್ಮ ಶರಣ.

೪೮೬.
ಜಗವ ಸುತ್ತಿಪ್ಪುದು ನಿನ್ನ ಮಾಯೆಯಯ್ಯ,
ನಿನ್ನ ಸುತ್ತಿಪ್ಪುದು ಎನ್ನ ಮನ ನೋಡಯ್ಯ!
ನೀನು ಜಗಕ್ಕೆ ಬಲ್ಲಿದನು,
ನಾನು ನಿನಗೆ ಬಲ್ಲಿದನು ಕಂಡಯ್ಯ!
ಕರಿಯು ಕನ್ನಡಿಯೊಳಡಗಿದಂತಯ್ಯ -
ಎನ್ನೊಳಗೆ ನೀನಡಗಿದೆ ಕೂಡಲಸಂಗಮದೇವ.

೪೮೭.
ಎಲ್ಲರ ಗಂಡರು ಬೇಂಟೆಯ ಹೋದರು.
ನೀನೇಕೆ ಹೋಗೆ ಎಲೆ ಗಂಡನೆ ?
ಸತ್ತುದ ತಾರದಿರು; ಕೈ ಮುಟ್ಟಿ ಕೊಲ್ಲದಿರು!
ಅಡಗಿಲ್ಲದೆ ಮನೆಗೆ ಬಾರದಿರು!
ದೇವರ ಧರ್ಮದಲೊಂದು
ಬೇಂಟೆ ದೊರೆಕೊಂಡರೆ
ಕೂಡಲಸಂಗಮದೇವಂಗರ್ಪಿತ ಮಾಡುವೆ ಎಲೆ ಗಂಡನೆ,

೪೮೮.
ಗ್ರಹ ಬಂದು ಆವರಿಸಲೊಡನೆ ತನ್ನ ಮರೆಸುವುದು;
ಮತ್ತೊಂದಕಿಂಬುಗೊಡಲೀಯದಯ್ಯ!
ಕೂಡಲಸಂಗಮದೇವನ ಅರಿವು
ಅನುಪಮವಾಗಲೊಡನೆ,
ಬೆವಹಾರದೊಳಗಿರಲೀಯದಯ್ಯ!

೪೮೯.
ಮನೆಯ ಗಂಡನ ಮನೆವಾರ್ತೆಯನೇನ ಹೇಳುವೆನವ್ವ!
ಅಂಗವಿದ್ಯವನೊಲ್ಲ,
ಕಂಗಳೊಳಗಣ ಕಸವ ಕಳೆದಲ್ಲದೆ ನೋಡಲೀಯ!
ಕಯ್ಯ ತೊಳೆದಲ್ಲದೆ ಮುಟ್ಟಲೀಯ,
ಕಾಲ ತೊಳೆದಲ್ಲದೆ ಹೊದ್ದಲೀಯ.
ಇಂತೀ ಸರ್ವಾಂಗ ತಲೆದೊಳೆದ ಕಾರಣ
ಕೂಡಲಸಂಗಮದೇವನೆನ್ನ
ಕೂಡಿಕೊಂಡನವ್ವ.

೪೯೦.
ಅಯ್ಯ, ನೀ ಮಾಡಲಾದ ಜಗತ್ತು;
ಅಯ್ಯ, ನೀ ಮಾಡಲಾದ ಸಂಸಾರ;
ಅಯ್ಯ, ನೀ ಮಾಡಲಾದ ಮರವೆ;
ಅಯ್ಯ, ನೀ ಮಾಡಲಾದ ದುಃಖ!
ಅಯ್ಯ, ನೀ ಬಿಡಿಸಿದರೆ ಬಿಟ್ಟಿತ್ತು ತಾಮಸವಯ್ಯ!
ನಾನೀ ಮಾಯೆಯ ಗೆದ್ದೆನೆಂಬ ಹಮ್ಮಿದೇಕೆ,
ಕೂಡಲಸಂಗಮದೇವ ?

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...