Skip to main content

ಅಕ್ಕನ ವಚನಗಳು - 251 ರಿಂದ 260 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೨೫೨.
ಊಡಿದಡುಣ್ಣದು, ನೀಡಿದಡರಿಯದು
ಕಾಣದು ಬೇಡದು, ಒಲಿಯದು ನೋಡಾ
ಊಡಿದರುಂಡು ನೀಡೀದಡೊಲಿದು
ಬೇಡಿದ ವರವ ಕೊಡುವ ಜಂಗಮಲಿಂಗದ ಪಾದವ
ಹಿಡಿದು ಬದುಕಿದೆ ಕಾಣಾ ಚೆನ್ನಮಲ್ಲಿಕಾರ್ಜುನ

೨೫೩.
ಕಾಯ ಪ್ರಸಾದವೆನ್ನ ಮನ ಪ್ರಸಾದವೆನ್ನ
ಪ್ರಾಣ ಪ್ರಸಾದವೆನ್ನ ಭಾವ ಪ್ರಸಾದವೆನ್ನ
ಸೈಧಾನ ಪ್ರಸಾದವೆನ್ನ ಸಮಭೋಗ ಪ್ರಸಾದವೆನ್ನ
ಚೆನ್ನಮಲ್ಲಿಕಾರ್ಜುನಯ್ಯ ನಿಮ್ಮ ಪ್ರಸಾದವ ಹಾಸಿ ಹೊದಿಸಿಕೊಂಡಿಪ್ಪೆ

೨೫೪.
ಮಧ್ಯಾಹ್ನದಿಂದ ಮೇಲೆ ಹಿರಿಯರಿಲ್ಲ
ಅಸ್ತಮಾನದಿಂದ ಮೇಲೆ ಜಿತೇಂದ್ರಿಯರಿಲ್ಲ
ವಿಧಿಯ ಮೀರುವ ಅಮರರಿಲ್ಲ
ಕ್ಷುಧೆ-ವ್ಯಸನ-ವಿಧಿಗಂಜಿ ನಾ ನಿಮ್ಮ ಮರೆವೊಕ್ಕು
ಚೆನ್ನಮಲ್ಲಿಕಾರ್ಜುನ ಬದುಕಿದೆ

೨೫೫.
ಅರಿದೆನೆಂದೆಡೆ ಅರಿಯಬಾರದು ನೋಡಾ
ಘನಕ್ಕೆ ಘನ ತಾನೆ ನೋಡಾ
ಚೆನ್ನಮಲ್ಲಿಕಾರ್ಜುನನ ನಿರ್ಣಯವಿಲ್ಲದೆ ಸೋತೆನು

೨೫೬.
ಎನ್ನಂತೆ ಪುಣ್ಯಂಗೆಯ್ದವರುಂಟೆ?
ಎನ್ನಂತೆ ಭಾಗ್ಯಂಗೆಯ್ದವರುಂಟೆ?
ಕಿನ್ನರನಂತಪ್ಪ ಸೋದರನೆನಗೆ
ಏಳೇಳು ಜನ್ಮದಲ್ಲಿ ಶಿವಭಕ್ತರೇ ಬಂಧುಗಳೆನಗೆ
ಚೆನ್ನಮಲ್ಲಿಕಾರ್ಜುನನಂತಪ್ಪ ಗಂಡ ನೋಡಾ ಎನಗೆ

೨೫೭.
ಅಯ್ಯಾ ನಿಮ್ಮ ಶರಣರು ಮೆಟ್ಟಿದ ಧರೆ ಪಾವನವಯ್ಯ
ಅಯ್ಯಾ ನಿಮ್ಮ ಶರಣರು ಇದ್ದ ಪುರವೇ ಕೈಲಾಸಪುರವಯ್ಯ
ಅಯ್ಯಾ ನಿಮ್ಮ ಶರಣರು ನಿಂದುದೇ ನಿಜನಿವಾಸವಯ್ಯಾ
ಚೆನ್ನಮಲ್ಲಿಕಾರ್ಜುನಯ್ಯ
ನಿಮ್ಮ ಶರಣ ಬಸವಣ್ಣನಿದ್ದ ಕ್ಷೇತ್ರ ಅವಿಮುಕ್ತ ಕ್ಷೇತ್ರವಾಗಿ
ಆನು ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು

೨೫೮.
ಗುರುವೆ ತೆತ್ತಿಗನಾದ
ಲಿಂಗವೆ ಮದವಳಿಗನಾದ
ನಾನು ಮದವಳಿಗೆಯಾದೆನು
ಈ ಭುವನವೆಲ್ಲರಿಯಲು
ಅಸಂಖ್ಯಾತರೆನಗೆ ತಾಯಿತಂದೆಗಳು
ಕೊಟ್ಟರು ಪ್ರಭುವಿನ ಮನೆಗೆ
ಸಾದೃಶ್ಯವಪ್ಪ ವರನ ನೋಡಿ
ಇದು ಕಾರಣ ಚೆನ್ನಮಲ್ಲಿಕಾರ್ಜುನ ಗಂಡನಾದ ಬಳಿಕ
ಮಿಕ್ಕಿನ ಲೋಕದ ಗಂಡರೆನಗೆ ಸಂಬಂಧವಿಲ್ಲವಯ್ಯ

೨೫೯.
ಬಸವಣ್ಣನ ಪಾದವ ಕಂಡೆನಾಗಿ
ಎನ್ನಂಗ ನಾಸ್ತಿಯಾಯಿತ್ತು
ಚೆನ್ನಬಸವಣ್ಣನ ಪಾದವ ಕಂಡೆನಾಗಿ
ಎನ್ನ ಪ್ರಾಣ ಬಯಲಾಯಿತ್ತು
ಪ್ರುಭುವೆ ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ
ಎನ್ನ ಅರಿವು ಸ್ವಯವಾಯಿತ್ತು
ಚೆನ್ನಮಲ್ಲಿಕಾರ್ಜುನದೇವಯ್ಯ,
ನಿಮ್ಮ ಶರಣರ ಕರುಣವ ಪಡೆದೆನಾಗಿ
ಎನಗೆ ಮತ್ತಾವುದಿಲ್ಲವಯ್ಯ ಪ್ರಭುವೆ

೨೬೦.
ಅಂಗಸಂಗದಲ್ಲಿ ಲಿಂಗಸಂಗಿಯಾದೆ
ಲಿಂಗಸಂಗದಲ್ಲಿ ಅಂಗಸಂಗಿಯಾದೆ
ಉಭಯಸಂಗವನರಿಯದೆ ಪರಿಣಾಮಿಯಾದೆನು
ನುಡಿಯ ಗಡಣವ ಮರೆದು ತೆರಹಿಲ್ಲದಿದ್ದರೇನು
ಎನ್ನ ದೇಹ ಚೆನ್ನಮಲ್ಲಿಕಾರ್ಜುನನ ಬೆರೆಸಿದ ಬಳಿಕ
ಇನ್ನು ನಾನು ಏನೆಂದೂ ಅರಿಯೆನಯ್ಯ

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...