Skip to main content

ಅಕ್ಕನ ವಚನಗಳು - 261 ರಿಂದ 270 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೨೬೧.
ಅಂಗದೊಳಗೆ ಅಂಗವಾಗಿ ಅಂಗಲಿಂಗೈಕ್ಯವ ಮಾಡಿದೆ
ಮನದೊಳಗೆ ಮನವಾಗಿ ಮನ ಲಿಂಗೈಕ್ಯವ ಮಾಡಿದೆ
ಭಾವದೊಳಗೆ ಭಾವವಾಗಿ ಭಾವಲಿಂಗೈಕ್ಯವ ಮಾಡಿದೆ
ಅರಿವಿನೊಳಗೆ ಅರಿವಾಗಿ ಜ್ಞಾನಲಿಂಗೈಕ್ಯವ ಮಾಡಿದೆ
ಕ್ರೀಗಳೆಲ್ಲವ ನಿಲಿಸಿ ಕ್ರಿಯಾತೀತವಾಗಿ
ನಿವೃತ್ತಿಲಿಂಗೈಕ್ಯವ ಮಾಡಿದೆ
ನಾನೆಂಬುದ ನಿಲಿಸಿ ನೀನೆಂಬುದ ಕೆಡಿಸಿ
ಉಭಯಲಿಂಗೈಕ್ಯವ ಮಾಡಿದೆ
ಚೆನ್ನಮಲ್ಲಿಕಾರ್ಜುನನೊಳಗೆ ನಾನಳಿದೆನಾಗಿ
ಲಿಂಗವೆಂಬ ಘನವು ಎನ್ನಲ್ಲಿ ಅಳಿಯಿತ್ತು [=ಉಳಿಯಿತ್ತು?]
ಕಾಣಾ ಸಂಗನಬಸವಣ್ಣ

೨೬೨.
ಎನ್ನ ಭಕ್ತಿ ನಿಮ್ಮ ಧರ್ಮ
ಎನ್ನ ಜ್ಞಾನ ಪ್ರಭುದೇವರ ಧರ್ಮ
ಎನ್ನ ಪರಿಣಾಮ ಚೆನ್ನಬಸವಣ್ಣನ ಧರ್ಮ
ಈ ಮೂವರೂ ಒಂದೊಂದ ಕೊಟ್ಟರೆನಗೆ-
ಮೂರು ಭಾವವಾಯಿತ್ತು
ಈ ಮೂರನು ನಿನ್ನಲ್ಲಿ ಸಮರ್ಪಿಸಿದ ಬಳಿಕ
ಎನಗಾವ ಜಂಜಡವಿಲ್ಲ
ಚೆನ್ನಮಲ್ಲಿಕಾರ್ಜುನದೇವರ ನೆನಹಿನಲ್ಲಿ
ನಿನ್ನ ಕರುಣದ ಶಿಶು ನಾನು ಕಾಣಾ ಸಂಗನಬಸವಣ್ಣ

೨೬೩.
ಲಿಂಗ ಸುಖಸಂಗದಲ್ಲಿ ಮನ ವೇದ್ಯವಾಯಿತ್ತು
ಇನ್ನೆಲ್ಲಿಯದಯ್ಯ ಎನಗೆ ನಿಮ್ಮಲ್ಲಿ ನಿರವಯವು?
ಇನ್ನೆಲ್ಲಿಯದಯ್ಯ ನಿಮ್ಮಲ್ಲಿ ಕೂಡುವುದು?
ಪರಮಸುಖಪರಿಣಾಮ ಮನ ಮೇರೆದಪ್ಪಿ
ನಾನು ನಿಜವನೈದುವ ಠಾವ ಹೇಳಾ ಚೆನ್ನಮಲ್ಲಿಕಾರ್ಜುನಯ್ಯ

೨೬೪.
ಮೂಲದ್ವಾರದ ಬೇರ ಮೆಟ್ಟಿ ಭೂಮಂಡಲವನೇರಿದೆ
ಆಚಾರದ ಬೇರ ಹಿಡಿದು ಐಕ್ಯದ ತುದಿಯನೇರಿದೆ
ವೈರಾಗ್ಯದ ಸೋಪಾನದಿಂದ ಶ್ರೀಗಿರಿಯನೇರಿದೆ
ಕೈವಿಡಿದು ತೆಗೆದುಕೊಳ್ಳಾ ಚೆನ್ನಮಲ್ಲಿಕಾರ್ಜುನ

೨೬೫.
ಬಯಲು ಲಿಂಗವೆಂಬೆನೆ? ಬಗಿದು ನಡೆದಲ್ಲಿ ಹೋಯಿತ್ತು
ಬೆಟ್ಟ ಲಿಂಗವೆಂಬೆನೆ? ಮೆಟ್ಟಿ ನಿಂದಲ್ಲಿ ಹೋಯಿತ್ತು
ತರುಮರಾದಿಗಳು ಲಿಂಗವೆಂಬೆನೆ! ತರಿದಲ್ಲಿ ಹೋಯಿತ್ತು
ಲಿಂಗ-ಜಂಗಮದ ಪಾದವೆ ಗತಿಯೆಂದು ನಂಬಿದ ಸಂಗನ ಬಸವಣ್ಣನ
ಮಾತು ಕೇಳದೆ ಕೆಟ್ಟೆನಯ್ಯ, ಚೆನ್ನಮಲ್ಲಿಕಾರ್ಜುನ

೨೬೬.
ನೋಡಿಹೆನೆಂದಡೆ ದೃಷ್ಟಿ ಮರೆಯಾಯಿತ್ತು
ಕೂಡಿಹೆನೆಂದೊಡೆ ಭಾವ ಮರೆಯಾಯಿತ್ತು
ಏನೆಂಬೆನೆಂತೆಂಬೆನಯ್ಯ?
ಅರಿದಿ[ದ=?]ಹೆನೆಂದೊಡೆ ಮರಹು ಮರೆಯಾಯಿತ್ತು
ನಿನ್ನ ಮಾಯೆಯನತಿಗಳೆವೊಡೆ ಎನ್ನಳವೇ
ಕಾಯಯ್ಯ ಚೆನ್ನಮಲ್ಲಿಕಾರ್ಜುನ

೨೬೭.
ಭಾವ ಬೀಸರವಾಯಿತ್ತು
ಮನ ಮೃತ್ಯುವನಪ್ಪಿತ್ತು, ಆನೇವೆನಯ್ಯ?
ಅಳಿತನದ ಮನ ತಲೆಕೆಳಗಾಯಿತ್ತು, ಆನೇವೆನಯ್ಯ?
ಬಿಚ್ಚಿ ಬೇರಾಗದ ಭಾವವಾಗಿ ಬೆರೆದೊಪ್ಪಚ್ಚಿ
ನಿನ್ನ ನಿತ್ಯಸುಖದೊಳಗಾನೆಂದಿಪ್ಪೆನಯ್ಯ
ಚೆನ್ನಮಲ್ಲಿಕಾರ್ಜುನ

೨೬೮.
ಹಗಲೆನ್ನೆ, ಇರುಳೆನ್ನೆ!
ಉದಯವೆನ್ನೆ, ಅಸ್ತಮಾನವೆನ್ನೆ! ಹಿಂದೆನ್ನೆ, ಮುಂದೆನ್ನೆ!
ನೀನಲ್ಲದೆ ಪರತೊಂದಹುದೆನ್ನೆ! ಮನ ಘನವಾದುದಿಲ್ಲಯ್ಯ!
ಕತ್ತಲೆಯಲ್ಲಿ ಕನ್ನಡಿಯ ನೋಡಿ ಕಳವಳಗೊಂಡೆನಯ್ಯ!
ನಿಮ್ಮ ಶರಣ ಬಸವಣ್ಣನ ತೇಜದೊಳಗಲ್ಲದೆ
ಆನೆನ್ನ [=ಆಂ ನಿನ್ನ?]ನೆಂತು ಕಾಂಬೆನು ಹೇಳಾ
ಚೆನ್ನಮಲ್ಲಿಕಾರ್ಜುನ

೨೬೯.
ಕಾಯದ ಕಾರ್ಪಣ್ಯವರತಿತ್ತು
ಕರಣಂಗಳ ಕಳವಳವಳಿದಿತ್ತು
ಮನ ತನ್ನ ತಾರ್ಕಣೆಯ ಕಂಡು ತಳವೆಳಗಾದುದು
ಇನ್ನೇವೆನಿನ್ನೇವೆನಯ್ಯ?
ನಿಮ್ಮ ಶರಣ ಬಸವಣ್ಣನ ಶ್ರೀಪಾದವ ಕಂಡಲ್ಲದೆ
ಬಯಕೆ ಬಯಲಾಗದು!
ಇನ್ನೇವೆನಿನ್ನೇವೆನಯ್ಯ ಚೆನ್ನಮಲ್ಲಿಕಾರ್ಜುನ

೨೭೦.
ಅಯ್ಯ ಕತ್ತಲೆಯ ಕಳೆದುಳಿದ
ಸತ್ಯ ಶರಣರ ಪರಿಯನೇನೆಂಬೆನಯ್ಯ!
ಘನವನೊಳಕೊಂಡ ಮನದ ಮಹಾನುಭಾವಿಗಳ
ಬಳಿವಿಡಿದು ಬದುಕುವೆನಯ್ಯ
ಅಯ್ಯ, ನಿನ್ನಲ್ಲಿ ಬೇರೊಂದರಿಯದ ಲಿಂಗಸುಖಿಗಳ ಸಂಗದಲ್ಲಿ
ದಿನವ ಕಳೆಯಿಸಯ್ಯ, ಚೆನ್ನಮಲ್ಲಿಕಾರ್ಜುನ

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...