Skip to main content

ಅಕ್ಕನ ವಚನಗಳು - 311 ರಿಂದ 320 ರವರೆಗೆ


Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೩೧೧.
ನಾಳೆ ಬರುವುದು ನಮಗಿಂದೇ ಬರಲಿ
ಇಂದು ಬರುವುದು ನಮಗೀಗಲೇ ಬರಲಿ
ಆಗೀಗ ಎನ್ನದಿರು ಚೆನ್ನಮಲ್ಲಿಕಾರ್ಜುನ

೩೧೨.
ಕಿಡಿಕಿಡಿ ಕಾರಿದರೆನಗೆ
ಹಸಿವು ತೃಷೆ ಅಡಗಿತ್ತೆಂಬೆ
ಸಮುದ್ರ ಮೇರೆದಪ್ಪಿದರೆ
ಎನಗೆ ಮಜ್ಜನವ ನೀಡಿದರೆಂಬೆ
ಮುಗಿಲು ಹರಿದುಬಿದ್ದರೆ
ಎನಗೆ ಪುಷ್ಪದ ಅರಳೆಂಬೆ
ಶಿರ ಹೋದರೆ ಚೆನ್ನಮಲ್ಲಿಕಾರ್ಜುನದೇವಂಗೆ
ಅರ್ಪಿತವೆಂಬೆ

೩೧೩.
ಹಿಂಡನಗಲಿ ಹಿಡಿವಡೆದ ಕುಂಜರ
ತನ್ನ ವಿಂಧ್ಯವ ನೆನೆವಂತೆ ನೆನೆವೆನೆಯ್ಯ !
ಬಂಧನಕ್ಕೆ ಬಂದ ಗಿಳಿ ತನ್ನ ಬಂಧುವ ನೆನೆವಂತೆ ನೆನೆವೆನೆಯ್ಯ !
ಕಂದ, ನೀನಿತ್ತ ಬಾ ಎಂದು
ನೀವು ನಿಮ್ಮಂದವ ತೋರಯ್ಯ ಚೆನ್ನಮಲ್ಲಿಕಾರ್ಜುನ

೩೧೪.
ಉದಯದಲೆದ್ದು ನಿಮ್ಮ ನೆನೆವೆನಯ್ಯ
ನಿಮ್ಮ ಬರವ ಹಾರುತಿರ್ಪೆನಯ್ಯ
ಹಸೆ ಹಂದರವನಿಕ್ಕಿ ನಿಮ್ಮಡಿಗಳಿಗೆಡೆಮಾಡಿಕೊಂಡಿಪ್ಪೆನಯ್ಯಾ
ಚೆನ್ನಮಲ್ಲಿಕಾರ್ಜುನ, ನೀನಾವಾಗ ಬಂದಹೆಯೆಂದು

೩೧೫.
ಗಿರಿಯಲಲ್ಲದೆ
ಹುಲುಮೊರಡಿಯಲಾಡುವುದೇ ನವಿಲು?
[ಕೊಳನನಲ್ಲದೆ] ಕಿರುವಳ್ಳಕೆಳಸುವುದೇ ಹಂಸ?
ಮಾಮರ ತಳಿತಲ್ಲದೇ ಸ್ವರಗೈಯುವುದೇ ಕೋಗಿಲೆ?
ಪರಿಮಳವಿಲ್ಲದ ಪುಷ್ಪಕೆಳಸುವುದೇ ಭ್ರಮರ?
ಎನ್ನ ಜೀವ ಚೆನ್ನಮಲ್ಲಿಕಾರ್ಜುನಗಲ್ಲದೆ
ಅನ್ಯಕೆಳಸುವುದೇ ಎನ್ನ ಮನ ಕೇಳಿರೆ ಕೇಳದಿಯರಿರಾ!

೩೧೬.
ಪಂಚೇಂದ್ರಿಯದ ಉರುವಣೆಯಹುದು
ಮದಭರದ ಜವ್ವನದೊಡಲು ವೃಥಾ ಹೋಯಿತಲ್ಲ
ತುಂಬಿ ಪರಿಮಳವನೆ ಕೊಂಡು ಲಂಬಿಸುವ ತೆರನಂತೆ
ಎನ್ನೆಂದಿಗೆ ಒಳಗೊಂಬೆಯೋ ಅಯ್ಯ ಚೆನ್ನಮಲ್ಲಿಕಾರ್ಜುನಯ್ಯ?

೩೧೭.
ಇಂದ್ರನೀಲದ ಗಿರಿಯನೇರಿಕೊಂಡು
[ಚಂದ್ರಕಾಂತದ ಶಿಲೆಯ] ಮೆಟ್ಟಿಕೊಂಡು
ಕೊಂಬ ಬಾರಿಸುತ, ಹರನೇ
ಎನ್ನ ಕುಂಭಕುಚದ ಮೇಲೆ ನಿಮ್ಮನೆಂದಪ್ಪಿಕೊಂಬೆನಯ್ಯ?
ಅಂಗಭಂಗ-ಮನಭಂಗವಳಿದು
ನಿಮ್ಮನೆಂದಿಂಗೊಮ್ಮೆ ನೆರೆವೆನೋ ಚೆನ್ನಮಲ್ಲಿಕಾರ್ಜುನ?

೩೧೮.
ತಾನು ದಂಡಮಂಡಲಕ್ಕೆ ಹೋದನೆಂದರೆ
ನಾನು ಸುಮ್ಮನಿಹೆನು
ತಾನೆನ್ನ ಕೈಯೊಳಗಿದ್ದು, ಎನ್ನ ಮನದೊಳಗಿದ್ದು
ನುಡಿಯದಿದ್ದರಾನು ಎಂತು ಸೈರಿಸುವೆನವ್ವ?
ನೇಹವೆಂಬ ಕುಂಟಣಿ
ಚೆನ್ನಮಲ್ಲಿಕಾರ್ಜುನನ ನೆರಹದಿರ್ದಡೆ
ನಾನೇವೆ ಸಖಿಯೆ?

೩೧೯.
ಬಂಜೆ ಬೇನೆಯನರಿವಳೇ?
ಬಲದಾಯಿ ಮುದ್ದ ಬಲ್ಲಳೇ?
ನೊಂದ ನೋವ ನೋಯದವರೆತ್ತ ಬಲ್ಲರು?
[ಚೆನ್ನಮಲ್ಲಿಕಾರ್ಜುನನಿರಿದಲಗು] ಒಡಲಲ್ಲಿ ಮುರಿದು
ಹೊರಳುವೆನ್ನಳಲನು ನೀವೆತ್ತ ಬಲ್ಲಿರೇ, ಎಲೆ ತಾಯಿಗಳಿರಾ!

೩೨೦.
ಅರಿಸಿನವನೆ ಮಿಂದು, ಹೊಂದೊಡಿಗೆಯನೆ ತೊಟ್ಟು
ದೇವಾಂಗವನುಟ್ಟು ಪುರುಷ ಬಾರಾ, ಪುಣ್ಯರತ್ನವೇ ನೀ ಬಾ
ನಿನ್ನ ಬರವೆನ್ನಸುವಿನ ಬರವು ಬಾರಯ್ಯ
ಚೆನ್ನಮಲ್ಲಿಕಾರ್ಜುನಯ್ಯ ಬಂದಾನೆಂದು
ಬಟ್ಟೆಗಳ ನೋಡಿ ಬಾಯಾರುತ್ತಿಹೆನು

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...