Skip to main content

ಅಕ್ಕನ ವಚನಗಳು - 321 ರಿಂದ 330 ರವರೆಗೆ


Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೩೨೧.
ಕಳವಳದ ಮನವು ತಲೆಕೆಳಗಾದುದವ್ವ
ಸುಳಿದು ಬೀಸುವ ಗಾಳಿ ಉರಿಯಾಯಿತವ್ವ
ಬೆಳದಿಂಗಳು ಬಿಸಿಲಾಯಿತ್ತು ಕೆಳದಿ
ಹೊಳಲ ಸುಂಕಿಗನಂತೆ ತೊಳಲುತಿದ್ದೆನವ್ವ
ತಿಳುಹೌ ಬುದ್ಧಿಯ ಹೇಳಿ ಕರೆತಾರೆಲೆಗವ್ವ
ಚೆನ್ನಮಲ್ಲಿಕಾರ್ಜುನಂಗೆ ಎರಡರ ಮುನಿಸವ್ವ

೩೨೨.
ಇಂದೆನ್ನ ಮನೆಗೆ ಗಂಡ ಬಂದಹನೆಲೆಗವ್ವ
ನಿಮನಿಮಗೆಲ್ಲ ಶೃಂಗಾರವ ಮಾಡಿಕೊಳ್ಳಿ
ಚೆನ್ನಮಲ್ಲಿಕಾರ್ಜುನನೀಗಳೇ ಬಂದಹನು
ಇದಿರುಗೊಳ್ಳ ಬನ್ನಿರೇ ಅವ್ವಗಳಿರಾ!

೩೨೩.
ಬಂದಹನೆಂದು ಬಟ್ಟೆಯ ನೋಡಿ
ಬಾರದಿದ್ದರೆ ಕರಗಿ ಕೊರಗಿದೆನವ್ವ
ತಡವಾದರೆ ಬಡವಾದೆ ತಾಯೆ
ಚೆನ್ನಮಲ್ಲಿಕಾರ್ಜುನ ಒಂದಿರುಳಗಲಿದರೆ
ತೆಕ್ಕೆ ಸಡಿಲಿದ ಜಕ್ಕವಕ್ಕಿಯಂತಾದೆನವ್ವ

೩೨೪.
ಕೂಡಿ ಕೂಡುವ ಸುಖದಿಂದ
ಒಪ್ಪಚ್ಚಿ ಅಗಲಿ ಕೂಡುವ ಸುಖ ಲೇಸು ಕೆಳದಿ!
ಒಚ್ಚತ ಅಗಲಿರೆ, ಕಾಣದೆ ಇರಲಾರೆ,
ಎನ್ನ ದೇವ ಚೆನ್ನಮಲ್ಲಿಕಾರ್ಜುನನ ಅಗಲಿ
ಅಗಲದ ಸುಖವೆಂದಪ್ಪುದೋ!

೩೨೫.
ಉರಿಯ [ಪಳಿಯನೆ] ಉಡಿಸಿ, ಊರಿಂದ ಹೊರಗಿರಿಸಿ
ಕರೆಯಲಟ್ಟಿದ ಸಖಿಯ ನೆರೆದ ನೋಡೆಲೆಗವ್ವ
ತುರ್ಯಾವಸ್ಥೆಯಲ್ಲಿ ತೂಗಿ ತೂಗಿ ನೋಡಿ
ಕರೆ ನೊಂದೆ ನೋಡವ್ವ
ಅವಸ್ಥೆಯಿಂದ ಹಿರಿದು ದುಃಖದಲ್ಲಿ ಬೆಂದೆ
ಕರಿ ಬೆಂದು, ಗಿರಿ ಬೆಂದು
ಹೊನ್ನರಳಿಯ ಮರವನುಳಿದು
ಹಿರಿಯತನಗೆಡಿಸಿ ನೆರೆವೆನು ಚೆನ್ನಮಲ್ಲಿಕಾರ್ಜುನ

೩೨೬.
ಎರೆಯಂತೆ ಕರಕರಗಿ, ಮಳಲಂತೆ ಜರಿಜರಿದು
ಕನಸಿನಲಿ ಕಳವಳಿಸಿ ಆನು ಬೆರಗಾದೆ
ಆವಗೆಯ ಕಿಚ್ಚಿನಂತೆ ಸುಳಿಸುಳಿದು ಬೆಂದೆ
ಆಪತ್ತಿಗೆ ಸಖಿಯರ ನಾನಾರುವನು ಕಾಣೆ
ಅರಸಿ ಕಾಣದ ತನುವ, ಬೆರೆಸಿ ಕೂಡದ ಸುಖವ
ಎನಗೆ ನೀ ಕರುಣಿಸು ಚೆನ್ನಮಲ್ಲಿಕಾರ್ಜುನ

೩೨೭.
ಸಾವಿಲ್ಲದ ಸಹಜಂಗೆ, ರೂಹಿಲ್ಲದ ಚೆಲುವಂಗೆ
ಭವವಿಲ್ಲದ ಅಭವಂಗೆ, ಭಯವಿಲ್ಲದ ನಿರ್ಭಯ ಚೆಲುವಂಗೆ
ನಾನೊಲಿದೆನಯ್ಯ ಚೆನ್ನಮಲ್ಲಿಕಾರ್ಜುನ ಗಂಡನೆನಗೆ
ಮಿಕ್ಕಿದ ಲೋಕದ ಗಂಡರೆನಗೆ ಸಂಬಂಧವಿಲ್ಲವಯ್ಯ

೩೨೮.
ಅತ್ತೆ ಮಾಯೆ, ಮಾವ ಸಂಸಾರಿ
ಮೂವರು ಮೈದುನರು ಹುಲಿಯಂಥಾ ಅವದಿರು
ನಾಲುವರು ನಗೆವೆಣ್ಣು ಕೇಳು ಕೆಳದಿ
ಐವರು ಭಾವದಿರನೊಯ್ವ ದೈವವಿಲ್ಲ
ಆರು ಪ್ರಜೆಯತ್ತಿಗೆಯರ ಮೀರಲಾರೆನು ತಾಯೆ
ಹೇಳುವಡೆ ಏಳು ಪ್ರಜೆ ತೊತ್ತಿರ ಕಾವಲು
ಕರ್ಮವೆಂಬ ಗಂಡನ ಬಾಯ ಟೊಣೆದು
ಹಾದರವನಾಡುವೆನು ಹರನ ಕೂಡೆ
ಮನವೆಂಬ ಸಖಿಯ ಪ್ರಸಾದದಿಂದ
ಅನುಭಾವವ ಕಲಿತೆನು ಶಿವನೊಡನೆ
ಕರೆ ಚೆಲುವ ಶ್ರೀಶೈಲ ಚೆನ್ನಮಲ್ಲಿಕಾರ್ಜುನನ
ಸಜ್ಜನದ ಗಂಡನ ಮಾಡಿಕೊಂಬೆನು

೩೨೯.
ಕರಣ ಮೀಸಲಾಗಿ ನಿನಗರ್ಪಿತವಾಯಿತ್ತು
ಆನೊಂದರಿಯೆನಯ್ಯ
ಎನ್ನ ಗತಿ ನೀನಾಗಿ ಎನ್ನ ಮತಿ ನೀನಾಗಿ
ಪ್ರಾಣ ನಿಮಗರ್ಪಿತವಾಯಿತ್ತು
ನೀನಲ್ಲದ ಪೆರತೊಂದ ನೆನೆದೊಡೆ
ಆಣೆ, ನಿಮ್ಮಾಣೆ ಚೆನ್ನಮಲ್ಲಿಕಾರ್ಜುನ

೩೩೦.
ತನು ನಿಮ್ಮ ರೂಪಾದ ಬಳಿಕ ನಾನಾರಿಗೆ ಮಾಡುವೆ?
ಮನ ನಿಮ್ಮ ರೂಪಾದ ಬಳಿಕ ನಾನಾರ ನೆನೆವೆ?
ಪ್ರಾಣ ನಿಮ್ಮ ರೂಪಾದ ಬಳಿಕ ನಾನಾರನಾರಾಧಿಸುವೆ?
ಅರಿವು ನಿಮ್ಮಲ್ಲಿ ಸ್ವಯವಾದ ಬಳಿಕ ನಾನಾರನರಿವೆ?
ಚೆನ್ನಮಲ್ಲಿಕಾರ್ಜುನಯ್ಯ,
[ನಿಮ್ಮಿಂದ ನೀವೆಯಾಗಿ ನಿಮ್ಮನೇ ಮರೆದೆ]

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ