Skip to main content

ಅಕ್ಕನ ವಚನಗಳು - 331 ರಿಂದ 340 ರವರೆಗೆ


Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments. 

೩೩೧.
ಶಿವಗಣಂಗಳ ಮನೆಯಂಗಳ
ವಾರಣಾಸಿಯೆಂಬುದು ಹುಸಿಯೇ
ಪುರಾತನರ ಮನೆಯ ಅಂಗಳದಲ್ಲಿ
ಅಷ್ಟಾಷಷ್ಟಿತೀರ್ಥಂಗಳು ನೆಲೆಸಿಪ್ಪವಾಗಿ?
ಅದೆಂತೆಂದಡೆ:
ಕೇದಾರಸ್ಯೋದಕೇ ಪೀತೇ
ವಾರಣಸ್ಯಾಂ ಮೃತೇ ಸತಿ
ಶೀಶೈಲ ಶಿಖರೇ ದೃಷ್ಟೇ
ಪುನರ್ಜನ್ಮ ನ ವಿದ್ಯತೇ
ಎಂಬ ಶಬ್ದಕ್ಕಧಿಕವು
ಸುತ್ತಿಬರಲು ಶ್ರೀಶೈಲ, ಕೆಲಬಲದಲ್ಲಿ ಕೇದಾರ
ಅಲ್ಲಿಂದ ಹೊರಗೆ ವಾರಣಾಸಿ
ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗಿ
ಎನ್ನ ದೇವ ಚೆನ್ನಮಲ್ಲಿಕಾರ್ಜುನ
ನಿಮ್ಮ ಭಕ್ತರ ಮನೆಯಂಗಳ ವಾರಣಾಸಿಯಿಂದ
ಗುಂಜಿಯಧಿಕ ನೋಡಾ!

೩೩೨.
ನಿನ್ನ ಅಂಗದಾಚಾರವ ಕಂಡು
ಎನಗೆ ಲಿಂಗಸಂಗವಾಯಿತ್ತಯ್ಯ, ಬಸವಣ್ಣ
ನಿನ್ನ ಮನದ ಸುಜ್ಞಾನವ ಕಂಡು
ಎನಗೆ ಜಂಗಮಸಂಬಂಧವಾಯಿತ್ತಯ್ಯ, ಬಸವಣ್ಣ
ನಿನ್ನ ಸದ್ಭಕ್ತಿಯ ತಿಳಿದು
ಎನಗೆ ನಿಜಸಾಧ್ಯವಾಯಿತ್ತಯ್ಯ, ಬಸವಣ್ಣ
ಚೆನ್ನಮಲ್ಲಿಕಾರ್ಜುನನ ಹೆಸರಿಟ್ಟ
ಗುರು ನೀನಾದ ಕಾರಣ
ನಾನೆಂಬುದಿಲ್ಲವಯ್ಯ ಬಸವಣ್ಣ

೩೩೩.
ಅಯ್ಯ, ನಿಮ್ಮಾನುಭಾವಿಗಳ ಸಂಗದಿಂದ
ಎನ್ನ ತನು ಶುದ್ಧವಾಯಿತ್ತು!
ಅಯ್ಯ, ನಿಮ್ಮ ಅನುಭಾವಿಗಳು
ಎನ್ನನೊರೆದೊರೆದು, ಕಡಿಕಡಿದು, ಅರೆದರೆದು
ಅನುಮಾಡಿದ ಕಾರಣ
ಎನ್ನ ಮನ ಶುದ್ಧವಾಯಿತ್ತು!
ಎನ್ನ ಸರ್ವಭೋಗಾದಿ ಭೋಗಂಗಳೆಲ್ಲ
ನಿಮ್ಮ ಶರಣರಿಗರ್ಪಿತವಾಗಿ
ಎನ್ನ ಪ್ರಾಣ ಶುದ್ಧವಾಯಿತ್ತು!
ಎನ್ನ ಸರ್ವೇಂದ್ರಿಯಗಳೆಲ್ಲವು
ನಿಮ್ಮ ಶರಣರ ಪ್ರಸಾದವ ಕೊಂಡ ಕಾರಣ
ಎನ್ನ ಸರ್ವಾಂಗ ಶುದ್ಧವಾಯಿತ್ತಯ್ಯ!
ನಿಮ್ಮ ಶರಣರಿಂತು ಎನ್ನನಾಗುಮಾಡಿದ ಕಾರಣ
ಚೆನ್ನಮಲ್ಲಿಕಾರ್ಜುನಯ್ಯ,
ನಿಮ್ಮ ಶರಣರಿಗೆ ತೊಡಿಗೆಯಾದೆನಯ್ಯ ಪ್ರಭುವೆ!

೩೩೪.
ಬಸವಣ್ಣನ ಮನೆಯ ಮಗಳಾಗಿ ಬದುಕಿದೆನಾಗಿ
ತನ್ನ ಕರುಣ ಭಕ್ತಿ ಪ್ರಸಾದವ ಕೊಟ್ಟನು
ಚೆನ್ನಬಸವಣ್ಣನ ತೊತ್ತಿನ ಮಗಳಾದ ಕಾರಣ
ಒಕ್ಕ ಪ್ರಸಾದವ ಕೊಟ್ಟನು
ಪ್ರಭುದೇವರ ತೊತ್ತಿನ ಮಗಳಾದ ಕಾರಣ
ಜ್ಞಾನಪ್ರಸಾದವ ಕೊಟ್ಟನು
ಸಿದ್ಧರಾಮಯ್ಯನ ಶಿಶುಮಗಳಾದ ಕಾರಣ
ಪ್ರಾಣಪ್ರಸಾದವ ಸಾಧಿಸಿ ಕೊಟ್ಟನು
ಮಡಿವಾಳ ಮಾಚಿ ತಂದೆಯ ಮನೆಯ ಮಗಳಾದ ಕಾರಣ
ನಿರ್ಮಳ ಪ್ರಸಾದವ ನಿಶ್ಚಯಿಸಿ ಕೊಟ್ಟನು
ಇಂತೀ ಅಸಂಖ್ಯಾತಗಣಂಗಳೆಲ್ಲರೂ ತಮ್ಮ ಕರುಣದ ಕಂದನೆಂದು
ತಲೆದಡಹಿ ರಕ್ಷಿಸಿದ ಕಾರಣ
ಚೆನ್ನಮಲ್ಲಿಕಾರ್ಜುನನ ಪಾದಕ್ಕೆ ಯೋಗ್ಯಳಾದೆನು

೩೩೫.
ತನು ಮೀಸಲಾಗೆ ಭಾವವಚ್ಚುಗೊಂಡಿಪ್ಪುವುದವ್ವ
ಅಚ್ಚುಗದ ಸ್ನೇಹ, ನಿಚ್ಚಟದ ಮೆಚ್ಚುಗೆ,
ಬೆಚ್ಚು ಬೇರಾಗದ ಭಾವವಾಗೆ
ಚೆನ್ನಮಲ್ಲಿಕಾರ್ಜುನಯ್ಯ ಒಳಗೆ ಗಟ್ಟಿಗೊಂಡನವ್ವ

೩೩೬. ಮಚ್ಚು ಅಚ್ಚುಗವಾಗಿ ಒಪ್ಪಿದ ಪರಿಯ ನೋಡಾ
ಎಚ್ಚರೆ ಗರಿದೋರದಂತೆ ನಡಬೇಕು
ಅಪ್ಪಿದರೆ ಅಸ್ಠಿಗಳು ನುಗ್ಗುನುರಿಯಾಗಬೇಕು
ಬೆಚ್ಚರೆ ಬೆಸುಗೆಯರಿಯದಂತಿರಬೇಜು
ಮಚ್ಚು ಒಪ್ಪಿತ್ತು ಚೆನ್ನಮಲ್ಲಿಕಾರ್ಜುನಯ್ಯನ ಸ್ನೇಹ

೩೩೭.
ನಡೆಯದ ನುಡಿಗಡಣ, ಮಾಡದ ಕಲಿತನ
ಚಿತ್ರದ ಸತಿಯ ಶೃಂಗಾರವದೇತಕ್ಕೆ ಪ್ರಯೋಜನ?
ಎಲೆಯಿಲ್ಲದ ಮರನು, ಜಲವಿಲ್ಲದ ನದಿಯು,
ಗುಣಿಯಲ್ಲದವಗುಣಿಯ ಸಂಗವದೇತಕ್ಕೆ ಪ್ರಯೋಜನ?
ದಯವಿಲ್ಲದ ಧರ್ಮವು, ಭಯವಿಲ್ಲದ ಭಕ್ತಿಯು,
ನಯವಿಲ್ಲದ ಶಬ್ದವದೇತಕ್ಕೆ ಪ್ರಯೋಜನ?
ಎನ್ನ ದೇವ ಚೆನ್ನಮಲ್ಲಿಕಾರ್ಜುನ, ಲಿಂಗೈಕ್ಯವು
ಪ್ರಾಣಗುಣವರಿಯದವರ ಕೂಡೆ ಪ್ರಸಂಗವೇತಕ್ಕೆ?

೩೩೮.
ಪ್ರಾಣ ಹೊಲಮೇರೆಯಲ್ಲಿ ಪ್ರಾಣ ಸತ್ತುದ ಕಂಡೆ
ದೇವದಾನವಮಾನವರೆಲ್ಲಾ ಜೋಳವಾಳಿಯಲೈದಾರೆ
ಜಾಣ ಕಲುಕುಟಿಕನನಗಲದೆ ಹೂವನೆ ಕೊಯ್ದು
ಕಲಿಯುಗ ಕರಸ್ಥಲದೇವಪೂಜೆ ಘನ
ಮೇರುವಿನ ಕುದುರೆ ನಲಿದಾಡಲದು
ಭೂತರಾಜ ರಾಜರಂಗಳಿಗಳ[?] ಜಗಳ ಮೇಳಾವ
ಮರುಪತ್ತದ ಮಾತು ನಗೆ ಹಗರಣ
ಕ್ಷೀರಸಾಗರದಲ್ಲಿ ದಾರಿಯಳವಡದಯ್ಯ
ನೀ ಹೇಳಬೇಕು ಭಕ್ತರೆಂತಪ್ಪರೋ
ಪಂಚವರ್ಣದ ಬಣ್ಣ ಸಂಧೆವರದಾಟವು[?]
ಚೆನ್ನಮಲ್ಲಿಕಾರ್ಜುನಯ್ಯ,

ತ್ರಿಭುವನದ ಹೆಂಡಿರ ನೀರ ಹೊಳೆಯಲ್ಲಿರಿಸಿತ್ತು

೩೩೯.
ಹಸಿದ ಹಸುಳೆಗೆರೆದೆಯಾಹ
ವಿಷವ, ರಾಜಹಂಸೆಗುಕ್ಕು
ರಸವನೀಂಟಿಸಿದೆ, ಮಹೇಶ, ನೋಳ್ಪ ಕಣ್ಣೊಳು
ಕಸವ ಕವಿದೆ, ಕರ್ಣಗಳಿಗೆ
ದಸಿಯ ಬಡಿದೆ; ಕರುಣವಿಲ್ಲ-
ದಸಮಪಾತಕವನು ಎನಗೆ ಕೇಳಿಸಿಂದು ನೀ ||೧||
ಹರನೆ, ಕಣ್ಣೊಳುರಿಯನ್ನಿಟ್ಟ
ದುರುಳ, ನಂಜುಗೊರಲ, ಸರ್ಪ
ಧರ ತ್ರಿಶೂಲಿ! ನಿನ್ನ ನಂಬಿದವರನಸಿಯೊಳು
ಅರೆದು ಸಣ್ಣಿಸುವುದೆ ನಿನ್ನ
ಕರುಣವಲ್ಲದದೆಲ್ಲರಂತೆ
ಕರುಣಿಯೆಂಬ ಮರುಳನಾವ ?! ಮಗನ ಕೊಲಿಸಿರೇ? ||೨||
ಯತಿಯ ರಸಿಕನೆನಿಸಿ, ಪತಿ-
ವ್ರತೆಯ ಸಿತಗೆಯೆನಿಸಿ, ದಿವ್ಯ-
ಮತಿಗೆ ಸಟೆಯ ಬಿತ್ತಿ, ದಾನಿ-
ಗತಿದರಿದ್ರದೆಡರನೀವ
ಮತವೆ ನಿನ್ನದುತ್ತಮಿಕೆಯ ನೆರೆವ ತಪ್ಪೆಯ? ||೩||
ಅರಗಿಲೆರೆದ ಬೊಂಬೆಗುರಿಯ
ಭರಣವನ್ನು ತೊಡಿಸಲಹುದೆ?!
ಹರನೆ ನಿನ್ನ ಸ್ತೋತ್ರವಲ್ಲದನ್ಯವರಿಯದ
ತರಳೆಯೆನ್ನ ಕಿವಿಯೊಳೆನ್ನ
ಪುರುಷವಚನವನ್ನು ತುಂಬೆ
ಕರುಣವಿಲ್ಲಲಾ ಕಪರ್ದಿ... ||೪||
ಗಂಡನುಳ್ಳ ಹೆಣ್ಣನಾವ
ಗಂಡು ಬಯಸಿ ಕೇಳ್ದಡವನ
ತುಂಡುಗಡಿಯದಿಹನೆಯವಳ ಗಂಡನೆನ್ನಯ
ಗಂಡ ನೀನಿರಲ್ಕೆ ಕೇಳ್ದೊ
ಡಂಡುಗೊಂಡು ಸುಮ್ಮನಿಹೆ! ಶಿ-
ಖಂಡಿಯೆಂಬ ನಾಮ ಸಾಮ್ಯವಾದುದಿಂದಲಿ ||೫||

೩೪೦.
ಪತಿಯೆ ಗತಿಯೆನಿಪ್ಪ ಸತಿಗೆ
ಪತಿವ್ರತಾಭಿಧಾನ ಸೆಲ್ವು
ದಿತರ ಪತಿಯ ರತಿಯೊಳಿರ್ಪ ಸತಿಯ ಕ್ಷಿತಿಯೊಳು
ಸಿತಗೆಯೆನ್ನದಿಹರೆ? ದಿಟದ
ಪತಿಯದೊರ್ವ, ಸತಿಗೆ ಸಟೆಯ
ಪತಿಯದೊರ್ವನುಂಟೆ ತಳರಿ ತಳುವದೆ?!

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...